ಬ್ರೇಕಿಂಗ್ ನ್ಯೂಸ್
18-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಮೈಸೂರಿನ ಮುಡಾ ಕಚೇರಿಗೆ ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಸೈಟ್ ಮೂಲ ದಾಖಲೆ ಪಡೆಯಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸೈಟ್ಗಳ ಮೂಲ ದಾಖಲೆ ಕೊಡುವಂತೆ ಮುಡಾ ಅಧಿಕಾರಿಗಳಿಗೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮುಡಾ ಆಯುಕ್ತ ಹಾಗು ಕಾರ್ಯದರ್ಶಿಗೆ ಶುಕ್ರವಾರ ಇಡೀ ದಿನ ಇಡಿ ಅಧಿಕಾರಿಗಳು ಕ್ಲಾಸ್ ತೆಗೆದುಕೊಂಡಿದ್ದು, ಇಡಿ ಪ್ರಶ್ನೆಗೆ ಮುಡಾ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಶ್ರೀಮತಿ ಪಾರ್ವತಿ ಅವ್ರ ಸೈಟು ಮೂಲ ದಾಖಲಾತಿ ಕೊಡಿ. ವೈಟ್ನರ್ ಹಾಕಿದ್ದ ದಾಖಲೆ ಕೊಡಿ. ಮೂಲ ದಾಖಲೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.
ಸರಿಯಾದ ದಾಖಲೆ ಕೊಡಿ, ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಅಂತ ಇಡಿ ಅಧಿಕಾರಿಗಳು ಮುಡಾ ಸಿಬಂದಿಯನ್ನು ಎಚ್ಚರಿಸಿದ್ದಾರೆ. ನಾವು ಹೊಸಬರು ಸರ್, ಕಳೆದ ತಿಂಗಳಷ್ಟೇ ಹೊಸದಾಗಿ ಮುಡಾಗೆ ಬಂದಿದ್ದೇವೆ. ನಮಗೂ ಇದಕ್ಕೂ ಸಂಬಂಧವಿಲ್ಲ. ದಯಮಾಡಿ ಈ ವಿಚಾರದಲ್ಲಿ ನಮ್ಮನ್ನು ಬಿಡಿ. ಇಲ್ಲಿರುವ ದಾಖಲೆಗಳನ್ನು ಕೊಡ್ತೇವೆ. ನೀವು ಕೇಳಿದ ಕೆಲ ದಾಖಲೆಗಳ ಪೈಕಿ ಇರುವ ದಾಖಲೆಯನ್ನು ಕೊಡ್ತೀವಿ ಅಂತ ಮುಡಾ ಅಧಿಕಾರಿಗಳು ಇಡಿ ಅಧಿಕಾರಿಗಳ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
2010ರ ವರೆಗೆ 800 ಪುಟಗಳ ದಾಖಲಾತಿಗಳ ಜೆರಾಕ್ಸ್ ಪ್ರತಿಗಳನ್ನು ಮುಡಾ ಅಧಿಕಾರಿಗಳು ನೀಡಿದ್ದಾರಂತೆ. ಆದರೆ ನಮಗೆ ಈ ದಾಖಲಾತಿ ಬೇಡ. ಪಾರ್ವತಿ ಅವರಿಗೆ ಸೈಟು ವರ್ಗಾವಣೆಯಾದ ದಾಖಲೆ ಕೊಡಿ. 50:50 ಅನುಪಾತದ ಅಡಿಯಲ್ಲಿ ಹಂಚಿಕೆಯಾಗಿರುವ ದಾಖಲೆ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.
A team of 12 Enforcement Directorate officials searched the city office of the Mysuru Urban Development Authority Friday in connection with the money laundering case against Karnataka Chief Minister Siddaramaiah. The Congress leader - who has refused to comment on the raids - and his family face state and federal charges over allegations they profited from an exchange of land allotments by MUDA.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm