ಬ್ರೇಕಿಂಗ್ ನ್ಯೂಸ್
21-10-24 11:20 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸಚಿವ ಸಂತೋಷ್ ಲಾಡ್, ನಮ್ಮ ಸೈನಿಕ, ನಮ್ಮ ಹೀರೋ.. ಯೋಗೀಶ್ವರ್ ಕಾಂಗ್ರೆಸ್ ಬಂದರೆ ಅವರನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಯೋಗೀಶ್ವರ್ ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿ ಚಿಹ್ನೆಯಲ್ಲಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ ಕುಮಾರಸ್ವಾಮಿ ಅವರು ತನ್ನ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ಸಿದ್ಧರಿಲ್ಲ. ಇದರ ನಡುವೆಯೇ ಯೋಗೇಶ್ವರ್ ಚುನಾವಣೆ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬಸವರಾಜ್ ಹೊರಟ್ಟಿ ನಿವಾಸಕ್ಕೆ ತೆರಳಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತ ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್ ಲಾಡ್, ಸಿಪಿ ಯೋಗೇಶ್ವರ್ ನಮ್ಮ ಸೈನಿಕ, ನಮ್ಮ ಹೀರೊ. ಅವರು ಕಾಂಗ್ರೆಸ್ಗೆ ಬರ್ತಾರೆ ಅಂದ್ರೆ ಸ್ವಾಗತ ಮಾಡ್ತೇನೆ. ಸಿಪಿ ಯೋಗೇಶ್ವರ್ಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕೋ ಬೇಡವೋ ಅಂತ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತೆ, ಸಿಪಿ ಯೋಗೇಶ್ವರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಆಗ್ತಾರೆ ಅನ್ನೋ ಸುದ್ದಿ ಇದೆ. ಯೋಗೇಶ್ವರ್ ಬಂದ್ರೆ ಹೈಕಮಾಂಡ್, ನಮ್ಮ ಪಕ್ಷದ ಮುಖಂಡರು ಹಾಗೂ ನಾನು ವ್ಯಯಕ್ತಿಕವಾಗಿ ಸ್ವಾಗತ ಮಾಡ್ತೇನೆ ಎಂದಿದ್ದಾರೆ.
ಯೋಗೇಶ್ವರ್ ಅವರು ನಮ್ಮ ಪಕ್ಷಕ್ಕೆ ಬಂದ್ರೆ ಅನುಕೂಲ ಆಗುತ್ತೆ, ಅವರು ನಮ್ಮ ಸೈನಿಕ ಹೀರೋ, ಪಕ್ಷದ ನಾಯಕರು ಅವರನ್ನು ಸಂಪರ್ಕ ಮಾಡಿದ್ದಾರೋ ಇಲ್ವೋ ಗೊತ್ತಿಲ್ಲ. ಪಕ್ಷಕ್ಕೆ ಸೇರ್ಪಡೆಯಾದ್ರೆ ಚನ್ನಪಟ್ಟಣದಿಂದ ಕಾಂಗ್ರೆಸ್ ಟಿಕೆಟ್ ನೀಡ್ತಾರೆಯೇ ಅಂತ ನನಗೆ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರು ಹಾಗೂ ಅಲ್ಲಿನ ಮುಖಂಡರು ತೀರ್ಮಾನ ಮಾಡ್ತಾರೆ. ನಮ್ಮ ಪಕ್ಷದ ನಾಯಕರು ಸಿಪಿ ಯೋಗೇಶ್ವರ್ ಅವರೊಂದಿಗೆ ಚರ್ಚೆ ಮಾಡಿದ್ರು ಮಾಡಿರಬಹುದು, ಆದ್ರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.
Minister Santosh lad appluds C P Yogeshwar resignation, says he's out hero and solider. The resignation of BJP MLC C.P. Yogeshwar from his Council position and announcement of contesting possibly as an Independent in the Channapatna bypolls has come as a twist to the poll plot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm