ಬ್ರೇಕಿಂಗ್ ನ್ಯೂಸ್
21-10-24 11:20 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸಚಿವ ಸಂತೋಷ್ ಲಾಡ್, ನಮ್ಮ ಸೈನಿಕ, ನಮ್ಮ ಹೀರೋ.. ಯೋಗೀಶ್ವರ್ ಕಾಂಗ್ರೆಸ್ ಬಂದರೆ ಅವರನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಯೋಗೀಶ್ವರ್ ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿ ಚಿಹ್ನೆಯಲ್ಲಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ ಕುಮಾರಸ್ವಾಮಿ ಅವರು ತನ್ನ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ಸಿದ್ಧರಿಲ್ಲ. ಇದರ ನಡುವೆಯೇ ಯೋಗೇಶ್ವರ್ ಚುನಾವಣೆ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬಸವರಾಜ್ ಹೊರಟ್ಟಿ ನಿವಾಸಕ್ಕೆ ತೆರಳಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತ ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್ ಲಾಡ್, ಸಿಪಿ ಯೋಗೇಶ್ವರ್ ನಮ್ಮ ಸೈನಿಕ, ನಮ್ಮ ಹೀರೊ. ಅವರು ಕಾಂಗ್ರೆಸ್ಗೆ ಬರ್ತಾರೆ ಅಂದ್ರೆ ಸ್ವಾಗತ ಮಾಡ್ತೇನೆ. ಸಿಪಿ ಯೋಗೇಶ್ವರ್ಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕೋ ಬೇಡವೋ ಅಂತ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತೆ, ಸಿಪಿ ಯೋಗೇಶ್ವರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಆಗ್ತಾರೆ ಅನ್ನೋ ಸುದ್ದಿ ಇದೆ. ಯೋಗೇಶ್ವರ್ ಬಂದ್ರೆ ಹೈಕಮಾಂಡ್, ನಮ್ಮ ಪಕ್ಷದ ಮುಖಂಡರು ಹಾಗೂ ನಾನು ವ್ಯಯಕ್ತಿಕವಾಗಿ ಸ್ವಾಗತ ಮಾಡ್ತೇನೆ ಎಂದಿದ್ದಾರೆ.
ಯೋಗೇಶ್ವರ್ ಅವರು ನಮ್ಮ ಪಕ್ಷಕ್ಕೆ ಬಂದ್ರೆ ಅನುಕೂಲ ಆಗುತ್ತೆ, ಅವರು ನಮ್ಮ ಸೈನಿಕ ಹೀರೋ, ಪಕ್ಷದ ನಾಯಕರು ಅವರನ್ನು ಸಂಪರ್ಕ ಮಾಡಿದ್ದಾರೋ ಇಲ್ವೋ ಗೊತ್ತಿಲ್ಲ. ಪಕ್ಷಕ್ಕೆ ಸೇರ್ಪಡೆಯಾದ್ರೆ ಚನ್ನಪಟ್ಟಣದಿಂದ ಕಾಂಗ್ರೆಸ್ ಟಿಕೆಟ್ ನೀಡ್ತಾರೆಯೇ ಅಂತ ನನಗೆ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರು ಹಾಗೂ ಅಲ್ಲಿನ ಮುಖಂಡರು ತೀರ್ಮಾನ ಮಾಡ್ತಾರೆ. ನಮ್ಮ ಪಕ್ಷದ ನಾಯಕರು ಸಿಪಿ ಯೋಗೇಶ್ವರ್ ಅವರೊಂದಿಗೆ ಚರ್ಚೆ ಮಾಡಿದ್ರು ಮಾಡಿರಬಹುದು, ಆದ್ರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.
Minister Santosh lad appluds C P Yogeshwar resignation, says he's out hero and solider. The resignation of BJP MLC C.P. Yogeshwar from his Council position and announcement of contesting possibly as an Independent in the Channapatna bypolls has come as a twist to the poll plot.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm