ಬ್ರೇಕಿಂಗ್ ನ್ಯೂಸ್
22-10-24 11:13 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಬುಧವಾರ (ಅಕ್ಟೋಬರ್ 23) ನಗರದ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಮೂಲಕ ಒಂದೇ ವಾರದಲ್ಲಿ 2 ನೇ ಬಾರಿ ಶಾಲೆಗಳಿಗೆ ರಜೆ ಸಿಕ್ಕಿದೆ
ರಜೆ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಮೋರಿಗಳು ಉಕ್ಕಿ ಹರಿಯುತ್ತಿದ್ದು , ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿವೆ. ಸೋಮವಾರ ಬೆಳಿಗ್ಗೆ ತುರ್ತು ರಜೆ ಘೋಷಿಸಿದ್ದ ಜಿಲ್ಲಾಧಿಕಾರಿಗಳು ಮತ್ತೆ ಬುಧವಾರ ರಜೆ ಘೋಷಣೆ ಮಾಡಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜತೆಗೆ ಅಂಗನವಾಡಿಗೂ ರಜೆ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಪತ್ರದಲ್ಲಿ ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ರಜೆ ಘೋಷಣೆ ಖಾಸಗಿ ಶಾಲೆಗಳು ವಿರೋಧ ;
ಮಳೆ ಹಿನ್ನೆಲೆ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಿರುವುದಕ್ಕೆ ಕೆಲ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿವೆ. ಖಾಸಗಿ ಶಾಲೆಗಳ ಸಂಘವಾದ ಕಾಮ್ಸ್ನ ಪ್ರಮುಖರಾದ ಶಶಿಕುಮಾರ್ ಅವರು ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. " ಬೆಂಗಳೂರಿನ ಕೆಲ ಭಾಗಗಳಲ್ಲಿ ಮಳೆ ಹೆಚ್ಚಿಲ್ಲ, ಅನಾಹುತಗಳೂ ಆಗಿಲ್ಲ. ಇನ್ನು ಸೋಮವಾರ ಬೆಳಿಗ್ಗೆ ಮಳೆ ಬಂದು ರಜೆ ಘೋಷಣೆ ಬಳಿಕ ಬಿಸಿಲು ಬಂತು. ಹೀಗಾಗಿ, ರಜೆ ನೀಡುವ ಅಧಿಕಾರನ್ನು ಆಯಾ ಶಾಲೆಗಳಿಗೆ ನೀಡಬೇಕು " ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Owing to continuous rains, as a precautionary measure, a holiday has been declared for all anganwadi centres and private/aided primary and high schools of Bengaluru Urban District on Wednesday (October 23, 2024).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm