ಬ್ರೇಕಿಂಗ್ ನ್ಯೂಸ್
24-10-24 12:12 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ಕಟ್ಟಡವೊಂದರ ಲಿಫ್ಟ್ಗೆ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲೀಕ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ಸುನಿಲ್ ಎಂಬಾತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕನ್ನಮಂಗಲ ಗ್ರಾಮ ಪಂಚಾಯತ್ ಮುಂಭಾಗದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 5 ಅಡಿ ಆಳ, ಅಗಲದ ಗುಂಡಿ ತೋಡಲಾಗಿತ್ತು. ಗುಂಡಿ ಸುತ್ತಮುತ್ತಲು ಸುರಕ್ಷಿತ ಕ್ರಮ ಅನುಸರಿಸುವಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿಬಂದಿದೆ.
ಬುಧವಾರ ಬೆಳಗ್ಗೆ ಬಾಲಕ ಸ್ನೇಹಿತರ ಜೊತೆ ಆಟವಾಡುವಾಗ ಆಚಾನಕ್ಕಾಗಿ ಗುಂಡಿಗೆ ಬಿದ್ದಿದ್ದ. ಐದು ಅಡಿ ಆಳದ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿದ್ದರಿಂದ ನೀರಿನಲ್ಲಿ ಬಾಲಕ ಮುಳುಗಿದ್ದ. ಅಲ್ಲೇ ಇದ್ದ ಸ್ನೇಹಿತರು ತಕ್ಷಣವೇ ನೀಡಿದ ಮಾಹಿತಿ ಮೇರೆಗೆ ಸ್ಥಳೀಯರು, ಬಾಲಕನನ್ನ ರಕ್ಷಿಸಿ ಆಸ್ಪತ್ರೆ ಸೇರಿಸಿದ್ದರು. ಆದರೆ, ಬಾಲಕ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಮಾಲೀಕ ಹಾಗೂ ಕಟ್ಟಡ ಕಾಮಗಾರಿ ವಹಿಸಿಕೊಂಡಿದ್ದ ಸುನಿಲ್ ಎಂಬುವರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಬರುವಂತೆ ನೊಟೀಸ್ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
A seven-year-old boy drowned in a water-filled lift pit of an under-construction building at Kannamangala in Bengaluru on Wednesday.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm