ಬ್ರೇಕಿಂಗ್ ನ್ಯೂಸ್
24-10-24 08:52 pm HK News Desk ಕರ್ನಾಟಕ
ಹಾವೇರಿ, ಅ.24: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತನ್ನ ಅಫಿಡವಿಟ್ ನಲ್ಲಿ 16.17 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರೆ.
ಭರತ್ ಬೊಮ್ಮಾಯಿ ತನ್ನ ಕೈಯಲ್ಲಿ 2.03 ಲಕ್ಷ ರೂ. ನಗದು ಹಣ ಹೊಂದಿದ್ದಾಗಿ ಹೇಳಿಕೊಂಡಿದ್ದು ವಿವಿಧ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ 4.05 ಲಕ್ಷ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 1.19 ಕೋಟಿ ಹೊಂದಿದ್ದಾರೆ.
ಸಾರ್ವಜನಿಕ ಕಂಪನಿಗಳಲ್ಲಿ 1.74 ಲಕ್ಷ , ಖಾಸಗಿ ಕಂಪನಿಗಳಲ್ಲಿ 50 ಸಾವಿರ, ಪಾಲುದಾರಿಕೆ ಕಂಪನಿಯಲ್ಲಿ 1.23 ಕೋಟಿ ರು. ಬಂಡವಾಳ ತೊಡಗಿಸಿದ್ದಾರೆ.
ಗೋಲ್ಡ್ ಚಿಟ್ ಫಂಡ್ನಲ್ಲಿ 70 ಸಾವಿರ, ಮ್ಯೂಚುವಲ್ ಫಂಡ್ನಲ್ಲಿ 10.20 ಲಕ್ಷ ತೊಡಗಿಸಿದ್ದಾರೆ. ಇದಲ್ಲದೆ, 81.61 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಇನ್ನಿತರ ಆದಾಯ, ಬಡ್ಡಿ ಸೇರಿದಂತೆ ಒಟ್ಟು 3.79 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಭರತ್ ಬೊಮ್ಮಾಯಿ ತನ್ನ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ.
ಬೆಂಗಳೂರಿನ ಆರ್.ಟಿ.ನಗರದಲ್ಲಿ ಒಂದು ವಾಸದ ಮನೆ, ಬೆಂಗಳೂರಿನ ಸೆಂಚುರಿ ಎಥೋಸ್ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಸೇರಿದಂತೆ 5.50 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಇಬ್ಬನಿ ಬಳಿ 1.43 ಲಕ್ಷ ನಗದು ಹಣ, ವಿವಿಧ ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 56.32 ಲಕ್ಷ ಹೊಂದಿದ್ದಾರೆ. ವಿವಿಧ ಕಂಪನಿಗಳಲ್ಲಿ 33 .75 ಲಕ್ಷ ಬಂಡವಾಳ ಹೂಡಿಕೆ ಮಾಡಿದ್ದಾರೆ. ಪಾಲುದಾರಿಕೆ ವ್ಯವಹಾರದಲ್ಲಿ 31.12 ಲಕ್ಷ ತೊಡಗಿಸಿದ್ದಾರೆ. ಪತ್ನಿಯ ಹೆಸರಿನಲ್ಲಿ ಮಾರುತಿ ಸ್ವಿಫ್ಟ್ ಕಾರು ಹೊಂದಿದ್ದಾರೆ. ಇವರಲ್ಲಿ 8.16 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು 3.64 ಕೋಟಿ ಮೌಲ್ಯದ ಸ್ಥಿರಾಸ್ತಿಯಿದೆ.
ಬೆಂಗಳೂರಿನ ತಾವರೆಕೆರೆ ಹೋಬಳಿ ಅಜ್ಜನಹಳ್ಳಿ ಗ್ರಾಮದಲ್ಲಿ ಒಂದು ಸೈಟ್, ಕೆಂಗೇರಿಯಲ್ಲಿ ಕೆಎಚ್ಬಿ ನಿವೇಶನ ಇದೆ. ಸೆಂಚುರಿ ಎಥೋಸ್ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಸೇರಿದಂತೆ 2.83 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಪುತ್ರನ ಬಳಿ 40.47 ಲಕ್ಷ ಮೌಲ್ಯದ ಚರಾಸ್ತಿಯಿದೆ. ಒಟ್ಟಾರೆ ಭರತ್ ಬೊಮ್ಮಾಯಿ 16.17 ಕೋಟಿ ರು. ಮೌಲ್ಯದ ಆಸ್ತಿ ಹೊಂದಿದ್ದಾರೆ.
Six candidates, including the former Chief Minister Basavaraj Bommai’s son Bharath Bommai, filed their nomination papers for the byelections to Shiggaon Assembly Constituency on Thursday taking the total number of nomination papers filed to 21.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm