ಬ್ರೇಕಿಂಗ್ ನ್ಯೂಸ್
24-10-24 09:13 pm Bangalore Correspondent ಕರ್ನಾಟಕ
ಬೆಂಗಳೂರು, ಅ.24: ಚನ್ನಪಟ್ಟಣ ಉಪ ಚುನಾವಣೆಯ ರಾಜಕೀಯ ಕಣ ರಂಗೇರಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಐದು ಬಾರಿಯ ಶಾಸಕ ಸಿಪಿ ಯೋಗೀಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅದ್ದೂರಿ ಮೆರವಣಿಗೆ ನಡೆಸಿ ಯೋಗೀಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದೇ ವೇಳೆ, ನಾಮಪತ್ರದಲ್ಲಿ ಸಿ.ಪಿ.ಯೋಗೇಶ್ವರ್ ತನ್ನ ಒಟ್ಟು ಆಸ್ತಿ ಮೌಲ್ಯ 35.09 ಕೋಟಿ ಎಂಬುದಾಗಿ ಘೋಷಣೆ ಮಾಡಿದ್ದಾರೆ. ಒಟ್ಟು 7.15 ಕೋಟಿ ಮೌಲ್ಯದ ಚರಾಸ್ತಿ ಇದ್ದರೆ, 27.94 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಯೋಗೇಶ್ವರ್ ಹೊಂದಿದ್ದಾರೆ.
ಪತ್ನಿ ಶೀಲಾ ಮತ್ತು ಅವರ ಒಟ್ಟು ಚರ ಮತ್ತು ಸ್ಥಿರಾಸ್ತಿ 32.46 ಕೋಟಿ ರೂ. ಆಗಿದೆ. ಯೋಗೀಶ್ವರ್ ಹೆಸರಲ್ಲಿ 250 ಗ್ರಾಂ ಚಿನ್ನ ಇದ್ದರೆ, ತಲಾ 70 ಲಕ್ಷ ರೂ. ಮೌಲ್ಯದ ಒಂದು ಬೆಂಜ್ ಮತ್ತು ಬಿಎಂಡಬ್ಲೂ ಕಾರು ಇದೆ. ತಾವು ಸಾರ್ವಜನಿಕರಿಂದ ಉಡುಗೊರೆಯಾಗಿ ಪಡೆದ 1 ಕೆಜಿ ಚಿನ್ನ ಮತ್ತು 50 ಕೆಜಿ ಬೆಳ್ಳಿಯನ್ನು ಪತ್ನಿ ಶೀಲಾ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಉಳಿದಂತೆ ಪತ್ನಿ ಹೆಸರಲ್ಲಿ 1.5 ಕೆಜಿ ಚಿನ್ನ, 20 ಕೆಜಿ ಬೆಳ್ಳಿ ಇದೆ.
ಯೋಗೀಶ್ವರ್ ಅವರ ಬಳಿ 54.2 ಎಕರೆ ಕೃಷಿ ಭೂಮಿ, ಬೆಂಗಳೂರಿನಲ್ಲಿ ಮನೆ ಸೇರಿದಂತೆ ಒಟ್ಟು 27.94 ಕೋಟಿ ರೂ. ಸ್ಥಿರಾಸ್ತಿ ಇದೆ. ಪತ್ನಿ ಶೀಲಾ ಅವರ ಬಳಿ 14.19 ಎಕರೆ ಕೃಷಿ ಭೂಮಿ ಸೇರಿದಂತೆ 25.35 ಕೋಟಿ ರೂ. ಮೌಲ್ಯದ ಸ್ತಿರಾಸ್ತಿ ಇದೆ. ಒಟ್ಟಾರೆ ಯೋಗೀಶ್ವರ್ 35.09 ಕೋಟಿ ರೂ. ಚರ ಮತ್ತು ಸ್ಥಿರಾಸ್ತಿ ಮಾಲೀಕರಾದರೆ, ಶೀಲಾ 32.46 ಕೋಟಿ ರೂ. ಚರ ಮತ್ತು ಸ್ಥಿರಾಸ್ತಿ ಒಡತಿ. ಯೋಗೇಶ್ವರ್ ಅವರಿಗೆ 25.46 ಕೋಟಿ ರೂ ಸಾಲವಿದ್ದರೆ, ಶೀಲಾ 3.41 ಕೋಟಿ ರೂ ಸಾಲ ಹೊಂದಿದ್ದಾರೆ. ಇನ್ನು ಯೋಗೇಶ್ವರ್ ಅವರ ವಿರುದ್ಧ 10 ಪ್ರಕರಣಗಳು ಬಾಕಿ ಇವೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
Former Minister C P Yogeshwar, who joined the Congress after quitting BJP, on Thursday filed his nomination as the grand old party's candidate for the November 13 Assembly by-poll from Channapatna, amid a show of strength. He was accompanied by Chief Minister Siddaramaiah, state Congress President and Deputy Chief Minister D K Shivakumar and district in-charge Minister Ramalinga Reddy, among other party leaders.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm