ಬ್ರೇಕಿಂಗ್ ನ್ಯೂಸ್
24-10-24 11:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.24: ರಾಜ್ಯದಲ್ಲಿ ಉಪ ಚುನಾವಣೆಗೆ ಬೆರಳೆಣಿಕೆ ದಿನಗಳು ಬಾಕಿ ಇರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಶಾಕ್ ಸಿಕ್ಕಿದೆ. ಕಾರವಾರದ ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಸತೀಶ್ ಸೈಲ್ ಮತ್ತು ಇತರ ಏಳು ಮಂದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ಆದೇಶಿಸಿದ್ದು ಅ.25ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಕಾರವಾರ ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ ಇತರರು ದೋಷಿ ಎಂದು ನ್ಯಾ.ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ. ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚಿಸಿದ್ದು ಇದರ ಬೆನ್ನಲ್ಲೇ ಏಳು ಮಂದಿಯನ್ನೂ ತನಿಖಾಧಿಕಾರಿಗಳು ಬಂಧಿಸಿದ್ದಾರೆ. ಸತೀಶ್ ಸೈಲ್, ಬಂದರು ಅಧಿಕಾರಿ ಮಹೇಶ್ ಬಿಳಿಯ, ಲಾಲ್ ಮಹಲ್ ಕಂಪನಿಯ ಮಾಲೀಕ ಪ್ರೇಮ್ ಚಂದ್ ಗರ್ಗ್, ಪಿಜಿಎಸ್ ಕಂಪನಿಯ ಶ್ರೀಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ ಖಾರದಪುಡಿ ಮಹೇಶ್, ಸ್ವಸ್ತಿಕ್ ಕಂಪನಿ ಮಾಲೀಕ ಕೆ.ವಿ.ನಾಗರಾಜ್, ಗೋವಿಂದರಾಜು, ಆಶಾಪುರ ಕಂಪನಿ ಮಾಲೀಕ ಚೇತನ್ ಇವರನ್ನು ಬಂಧಿಸಲಾಗಿದೆ.
ಕಾರವಾರದ ಬೇಲೆಕೇರಿ ಬಂದರಿನಲ್ಲಿ 11,312 ಮೆಟ್ರಿಕ್ ಟನ್ ಅದಿರನ್ನು ವಿದೇಶಕ್ಕೆ ಸಾಗಿಸುವ ಸಲುವಾಗಿ ಸಂಗ್ರಹಿಸಲಾಗಿತ್ತು. ಇದನ್ನು ಸಿಬಿಐ ಅಧಿಕಾರಿಗಳು ಜಪ್ತಿ ಮಾಡಿದ್ದರು. ಅನುಮತಿ ಇಲ್ಲದೇ ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ಈ ಅದಿರನ್ನು ವಿದೇಶಕ್ಕೆ ಸಾಗಿಸುತ್ತಿದ್ದರು. ಈ ಸಂಬಂಧ ಪ್ರತ್ಯೇಕ 6 ಪ್ರಕರಣಗಳು ದಾಖಲಾಗಿದ್ದವು. ಲೋಕಾಯುಕ್ತ ಸಂಸ್ಥೆ ಮತ್ತು ಸಿಬಿಐ ತನಿಖೆ ನಡೆಸಿ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿತ್ತು.
In the first conviction in cases related to illegal mining in Karnataka, a special court in Bengaluru on Thursday convicted Karwar MLA, Satish Krishna Sail, and six individuals, including a retired Deputy Conservator of Ports, and seven private companies on charges of illegally exporting seized iron ore worth several crores from Belekeri port in the State during 2009-10.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm