ಬ್ರೇಕಿಂಗ್ ನ್ಯೂಸ್
25-10-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.25 : ಹಳೇ ಪ್ರಕರಣದಲ್ಲಿ ಅರೆಸ್ಟ್ ವಾರೆಂಟ್ ಸಂಬಂಧಿಸಿ ಪೊಲೀಸರು ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ಮತ್ತು ಅವರ ಪುತ್ರನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದು ಈ ವೇಳೆ ಪೊಲೀಸರನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜ್ಞಾನಭಾರತಿ ಠಾಣೆ ಮಹಿಳಾ ಪಿಎಸ್ಐ ಸುರೇಖಾ ನೀಡಿದ ದೂರಿನ ಮೇರೆಗೆ ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ಮತ್ತು ಆಕೆಯ ಪುತ್ರ ಆರವಿಂದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಳೇ ಪ್ರಕರಣದ ವಾರೆಂಟ್ ಸಂಬಂಧಿಸಿ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನು ಮಂಜೂರು ಮಾಡಿತ್ತು. ಇದೀಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು ಇಬ್ಬರಿಗೂ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಆರೋಪಿ ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ವಿರುದ್ಧ ಬೆಂಗಳೂರಿನ 6ನೇ ಎಸಿಎಂಎಂ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿತ್ತು. ಅದರಂತೆ ಪಿಎಸ್ಐ ಸುರೇಖಾ ಅವರು ಅ.23ರಂದು ಆರೋಪಿ ಲಕ್ಷ್ಮೀ ಜಿ. ಪ್ರಸಾದ್ ಬೆಂಗಳೂರು ವಿಶ್ವವಿದ್ಯಾಲಯದ ಕ್ವಾಟ್ರರ್ಸ್ ಬಳಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲು ಸಿದ್ಧತೆ ಮಾಡಿಕೊಳ್ಳುವಾಗ, ಆಕೆ ಏಕಾಏಕಿ 'ನನ್ನನ್ನು ಏಕೆ ಬಂಧಿಸುತ್ತೀರಿ' ಎಂದು ಅವಾಚ್ಯ ಶಬ್ದಗಳಿಂದ ಪೊಲೀಸರನ್ನು ನಿಂದಿಸಿ ತಳ್ಳಾಡಿ ಕೈಗಳಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಬಳಿಕ ಆಕೆ ತನ್ನ ಮಗ ಅರವಿಂದ್ ಗೆ ಕರೆ ಮಾಡಿ ಠಾಣೆಗೆ ಕರೆಸಿಕೊಂಡಿದ್ದು ಇಬ್ಬರೂ ಸೇರಿ ಪೊಲೀಸರನ್ನು ನಿಂದಿಸಿದ್ದಾರೆ. ನ್ಯಾಯಾಲಯದ ಆದೇಶ ತೋರಿಸಿದರೂ ಕೇಳದ ಆತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ತಾನು ಹೈಕೋರ್ಟ್ ವಕೀಲ ಎಂದು ಅರವಿಂದ್ ಕೂಗಾಡಿದ್ದು ಪೊಲೀಸರ ವಶದಲ್ಲಿದ್ದ ಲಕ್ಷ್ಮೀ ಜಿ.ಪ್ರಸಾದ್ ಅವರನ್ನು ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಮಧ್ಯ ಪ್ರವೇಶಿಸಿದ ಇನ್ಸ್ಪೆಕ್ಟರ್ ರವಿ ಅವರಿಗೂ ಆರೋಪಿಗಳು ಕೈಗಳಿಂದ ಹಲ್ಲೆ ಮಾಡಿ ಪರಚಿ ಗಾಯಗೊಳಿಸಿದ್ದಾರೆ. ಠಾಣಾ ಸಿಬ್ಬಂದಿಗೂ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Writer Lakshmi G Prasad arrested over assult on police in Bangalore. Police had reached her house with warrant after which she assulted them and later has been arrested.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm