ಬ್ರೇಕಿಂಗ್ ನ್ಯೂಸ್
29-10-24 02:43 pm HK News Desk ಕರ್ನಾಟಕ
ಮೈಸೂರು, ಅ.29: ಮುಸ್ಲಿಮರು ವಕ್ಫ್ ಆಸ್ತಿ ಅಂತಾರಲ್ಲ, ಅದು ಅವರಿಗೆ ಎಲ್ಲಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಇವರಿಗೆ ಕೊಟ್ಟ ಆಸ್ತಿಯಾ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು? ಯಾರಿಂದ ಅವರಿಗೆ ಬಳುವಳಿ ಬಂದಿದ್ದು? ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ವಿಜಯಪುರದಲ್ಲಿ ರೈತರಿಗೆ ಸೇರಿದ 1200 ಎಕ್ರೆ ಜಮೀನು ತನ್ನದೆಂದು ವಕ್ಫ್ ಬೋರ್ಡ್ ಹೇಳಿದೆ. ಈ ವಕ್ಫ್ ಎಂದರೆ ಏನು? ಇವರಿಗೆ ಜಮೀನು ಬಳುವಳಿ ಆಗಿ ಕೊಟ್ಟಿದ್ದು ಯಾರು? ಇದೇನು ಜಿನ್ನಾ ಕೊಟ್ಟ ಭೂಮಿಯೇ? ಎಂದು ಪ್ರಶ್ನಿಸಿದರು.
ಕೇವಲ ವಿಜಯಪುರ ಮಾತ್ರವಲ್ಲ ಅಲ್ಲ. ಹುಣಸೂರಿನ ಗಣೇಶ ದೇವಸ್ಥಾನ, ಚಿಕ್ಕಮಗಳೂರಿನಲ್ಲಿ ಖಾಸಗಿ ಆಸ್ತಿಯನ್ನು ಕೂಡ ವಕ್ಫ್ ಆಸ್ತಿ ಎಂದು ಹೇಳಿ ಕಬಳಿಸುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿನ 1.25 ಲಕ್ಷ ಎಕರೆ ಜಮೀನು ತಮಗೆ ಸೇರಿದ್ದು ಎಂದು ವಕ್ಫ್ ಮಂಡಳಿ ವಾದಿಸುತ್ತಿದೆ. ಚಿಕ್ಕಮಗಳೂರಿನಲ್ಲೂ ಇದೇ ಕಥೆ ಆಗಿದೆ. ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡ್ತಾರೆ, ಇದು ನಮ್ಮದು ಅಂತಿದ್ದಾರೆ. ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಮರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದೀರಾ? ಯಾವ ಮುಸಲ್ಮಾನರಿಗೂ ಕೃಷಿಗೆ ಜಮೀನು ಬಿಟ್ಟುಕೊಟ್ಟಿಲ್ಲ. ಬದಲಾಗಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ವಕ್ಫ್ ಕಾಯ್ದೆ ಅನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.
ನಮ್ಮ ದೇವಾಲಯ, ಮಠಗಳಲ್ಲಿ ಹಾಕುವಂತೆ ಯಾವತ್ತಾದರೂ ಮಸೀದಿ ಚರ್ಚ್ ಗಳಲ್ಲಿ ಹಿಡಿ ಅನ್ನ ಯಾರಿಗಾದ್ರೂ ಹಾಕಿದ್ದೀರಾ? ಎಂದು ಪ್ರತಾಪಸಿಂಹ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ನಂತರ ಚಾಮುಂಡೇಶ್ವರಿ, ಹಾಸನಾಂಬೆ ಸೇರಿದಂತೆ ಹಿಂದೂ ದೇವತೆಗಳ ಮೇಲೆ ನಂಬಿಕೆ ಬಂದಿದೆ. ಹೀಗಾಗಿ ದೇವಸ್ಥಾನ ಸುತ್ತಲು ಹೋಗಿದ್ದಾರೆ. ಮುಡಾ ಪ್ರಕರಣದಿಂದ ಪಾರು ಮಾಡಲು ಹಿಂದು ದೇವರ ಮೊರೆ ಹೋಗಿದ್ದಾರೆ. ವಿಜಯಪುರ ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೂಗಳ ಪರ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಪ್ರತಾಪ ಸಿಂಹ ಹೇಳಿದರು.
Former MP Pratap Simha slams waqf board over notices to many Hindu families claiming land.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm