ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm