ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm