ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm