ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm