ಬ್ರೇಕಿಂಗ್ ನ್ಯೂಸ್
04-11-24 08:29 pm HK News Desk ಕರ್ನಾಟಕ
ವಿಜಯಪುರ, ನ.4: ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಪ್ ಕಾಯ್ದೆ ಬಗ್ಗೆ ಉಲ್ಲೇಖವೇ ಇಲ್ಲ. ಆದರೆ 1954-55 ರಲ್ಲಿ ನೆಹರು ಸರ್ಕಾರ ವಕ್ಪ್ ಕಾಯ್ದೆಯನ್ನು ಸಂವಿಧಾನಕ್ಕೆ ಸೇರಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಇಲ್ಲಿ ಯಾವುದೇ ಜಮೀನು ವಕ್ಪ್ ನದ್ದು ಆಗುವುದಕ್ಕೆ ಸಾಧ್ಯವಿಲ್ಲ. ಇಲ್ಲಿನ ಮಠಗಳಿಗೆ ಚಾಲುಕ್ಯರು, ಹೊಯ್ಸಳರು, ಕಿತ್ತೂರು ರಾಣಿ ಚೆನ್ನಮ್ಮ ಜಮೀನು ಕೊಟ್ಟದ್ದು. ಆದರೆ, ಇಂಥವನ್ನೂ ಜಮೀರ್ ಖಾನ್ ವಕ್ಪ್ ಮಾಡಿ ನೋಟಿಸ್ ಕೊಡಿಸಿದ್ದಾರೆ. ಒಂದು ರೀತಿಯಲ್ಲಿ ಮುಸ್ಲಿಮರ ಷರಿಯತ್ ಕಾನೂನನ್ನು ರಾಜ್ಯದಲ್ಲಿ ತರೋಕೆ ಸಿದ್ದರಾಮಯ್ಯ ಹಾಗೂ ಜಮೀರ್ ಹೊರಟಿದ್ದಾರೆ. ನಾವು ಭಾರತದ ಸಂವಿಧಾನದ ಪ್ರಕಾರ ನಡೆಯುವವರು. ಲೋಕಸಭೆಯಲ್ಲಿ ಸಂವಿಧಾನ ಪ್ರತಿ ಹಿಡಿದುಕೊಂಡು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರಿ. ಇಲ್ಲಿ ಬಂದು ಷರಿಯತ್ ಕಾನೂನು ತರುತ್ತೀರಿ. ಕರ್ನಾಟಕದಲ್ಲಿ ಇದು ನಡೆಯಲ್ಲ. ರಾಜ್ಯದಲ್ಲಿ ಹಲವಾರು ದೇವಸ್ಥಾನಗಳು ವಕ್ಪ್ ಎಂದಾಗಿವೆ. ಇದರ ಹಿಂದೆ ಯಾವ ರೀತಿಯ ಷಡ್ಯಂತ್ರ ಇದೆಯೆಂದು ಅರ್ಥವಾಗುತ್ತದೆ ಎಂದು ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ನೇತೃತ್ವದಲ್ಲಿ ಜಮೀರ್ ರಾಜ್ಯದ ಎಲ್ಲ ಭೂಮಿಯನ್ನು ವಕ್ಪ್ ಅಡಿಯಲ್ಲಿ ತರಲು ಹೊರಟಿದ್ದಾರೆ. ಕಾನೂನು ಬಾಹಿರವಾಗಿ ವಕ್ಪ್ ಅದಾಲತ್ ಮಾಡುತ್ತಿದ್ದಾರೆ. ಇವರು ಯಾವ ಕಾನೂನು ಅಡಿ ವಕ್ಪ್ ಅದಾಲತ್ ಮಾಡುತ್ತಿದ್ದಾರೆ ಎಂದು ಹೇಳಬೇಕಾಗಿದೆ. ರೈತರಿಗೆ ನೀಡಿದ್ದ ನೋಟಿಸ್ ರದ್ದು ಮಾಡಬೇಕು, ಪಹಣಿಯಲ್ಲಿ ನಮೂದಾಗಿರುವ ವಕ್ಪ್ ಬೋರ್ಡ್ ಹೆಸರು ತೆಗೆಯಬೇಕು ಎಂದು ಹೇಳಿದ ಶೋಭಾ, ಉಡುಪಿಯ ಕೃಷ್ಣ ಮಠದ ಮುಂಭಾಗದಿಂದ ಶಿವಳ್ಳಿ ಎಂಬ ಗ್ರಾಮದ ವರೆಗೆ ಸುಲ್ತಾನಪುರ ಎಂದು ದಿಶಾಂಕ ಆ್ಯಪ್ ನಲ್ಲಿ ತೋರಿಸುತ್ತಿದೆ. ಇದರಿಂದ ಆತಂಕದ ವಾತಾವರಣ ಮನೆ ಮಾಡಿದೆ ಎಂದರು.
ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕಗಳು ವಕ್ಪ್ ಅಡಿಯಲ್ಲಿವೆ. ಇದು ಬದಲಾವಣೆ ಆಗಬೇಕು. ವಿಜಯಪುರದ ಡಿಸಿ, ಎಸ್ಪಿ ಕಚೇರಿ, ಜಿಲ್ಲಾಸ್ಪತ್ರೆ ಹಾಗೂ ಇತರೇ ದೇವಸ್ಥಾನಗಳು ಕೂಡ ವಕ್ಪ್ ಭೂಮಿ ಎಂದಾಗಿವೆ. ದಾನದ ಮೂಲಕ ವಕ್ಪ್ ಗೆ ಬರಬೇಕು, ಆದರೆ ಇವೆಲ್ಲಾ ಹೇಗೆ ವಕ್ಪ್ ಎಂದಾದವು. 1974 ರ ಗೆಜೆಟ್ ನೊಟಿಫಿಕೇಷನ್ ಸಂಪೂರ್ಣ ರದ್ದಾಗಬೇಕು. ಇದು ರದ್ದಾಗೋ ವರೆಗೂ ಹೋರಾಟ ಮಾಡುತ್ತೇವೆ ಎಂದರು.
There was no waqf in Ambedkar constitution, Hoysalas, Chalukyas gave land to monasteries slams Shobha Karandlaje in vijaypur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm