ಬ್ರೇಕಿಂಗ್ ನ್ಯೂಸ್
06-11-24 09:31 pm Bangalore Correspondent ಕರ್ನಾಟಕ
ಬೆಂಗಳೂರು, ನ 06: ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಮೃತಪಟ್ಟ ಘಟನೆ ಯಶವಂತಪುರ ಬಳಿ ನಡೆದಿದೆ. ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಮೂಲದ ಕಿರಣ್ ಕುಮಾರ್ (38) ಮೃತಪಟ್ಟ ಬಸ್ ಚಾಲಕ ಎಂದು ಬಿಎಂಟಿಸಿ ಅಧಿಕಾರಿಗಳು ದೃಢಪಡಿಸಿದ್ದಾರೆ.
ಕರ್ತವ್ಯ ಮುಗಿಸಿ ಕೊನೆಯ ಸುತ್ತುವಳಿಯಲ್ಲಿ, ನೆಲಮಂಗಲದಿಂದ ದಾಸನಪುರ ಘಟಕಕ್ಕೆ ಬರುವಾಗ ಚಾಲಕ ಕಿರಣ್ಗೆ ಹಠಾತ್ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಡ್ರೈವರ್ ಸೀಟ್ನಿಂದ ಪಕ್ಕಕ್ಕೆ ಜಾರಿ ಬಿದ್ದಿದ್ದಾನೆ. ಚಲನೆಯಲ್ಲಿದ್ದ ಬಸ್, ಈ ವೇಳೆ ಪಕ್ಕದಲ್ಲಿದ್ದ ಮತ್ತೊಂದು ಬಿಎಂಟಿಸಿ ಬಸ್ಗೆ ಸ್ವಲ್ಪ ಡಿಕ್ಕಿ ಹೊಡೆದಿದೆ.


ಇದನ್ನು ಗಮನಿಸಿದ ನಿರ್ವಾಹಕ ಓಬಳೇಶ್ ಚಲಿಸುತ್ತಿದ್ದ ಬಸ್ ಕೂಡಲೇ ನಿಲ್ಲಿಸಿ ಚಾಲಕನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಕಿರಣ್ ಕುಮಾರ್ ಕೊನೆಯುಸಿರೆಳೆದಿದ್ದು, ಮರಣ ಹೊಂದಿರುವ ಬಗ್ಗೆ ವೈದ್ಯರು ಕೂಡ ಧೃಢಪಡಿಸಿದ್ದಾರೆ.
ಬಸ್ ರಸ್ತೆಯ ಒಂದು ಬದಿಗೆ ವಾಲುತ್ತಾ ಸಾಗಿತ್ತು. ಪಕ್ಕದಲ್ಲಿದ್ದ ಮತ್ತೊಂದು ಬಿಎಂಟಿಸಿ ಬಸ್ಗೆ ಸ್ಪಲ್ಪ ಡಿಕ್ಕಿಯೂ ಹೊಡೆದಿದೆ. ಇನ್ನೇನು ದೊಡ್ಡ ಪ್ರಮಾಣದ ಅನಾಹುತ ಸಂಭವಿಸಬೇಕು ಅನ್ನುವಷ್ಟರಲ್ಲೇ ನಿರ್ವಾಹಕ ಓಬಳೇಶ್ ಚಾಲಕನ ಸೀಟಿನಲ್ಲಿ ಕುಳಿತು ಬಸ್ ಅನ್ನು ತಕ್ಷಣ ನಿಲ್ಲಿಸಿದ್ದಾರೆ. ಮಾರ್ಗ ಸಂಖ್ಯೆ 256M/1, ವಾಹನ ಸಂಖ್ಯೆ F- 4007 ಆಗಿದ್ದು, ನಿರ್ವಾಹಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಡ್ರೈವರ್ ಕಿರಣ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಬಸ್ ಕಂಡಕ್ಟರ್ ಓಬ್ಳೇಶ್ ಸಂಚರಿಸುತ್ತಿದ್ದ ಬಸ್ ಅನ್ನು ನಿಲ್ಲಿಸಿ, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.@RLR_BTM @BMTC_BENGALURU#BMTCBusIncident #Bengaluru #BusConductor #BusDriver… pic.twitter.com/RGFQNaUA50
— NewsFirst Kannada (@NewsFirstKan) November 6, 2024
BMTC bus driver dies of heart attack while driving bus, video recorded. Timely presence of the bus conductor has saved many lives of the passengers. The video of this incident as gone viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm