ಬ್ರೇಕಿಂಗ್ ನ್ಯೂಸ್
06-11-24 09:31 pm Bangalore Correspondent ಕರ್ನಾಟಕ
ಬೆಂಗಳೂರು, ನ 06: ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಮೃತಪಟ್ಟ ಘಟನೆ ಯಶವಂತಪುರ ಬಳಿ ನಡೆದಿದೆ. ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಮೂಲದ ಕಿರಣ್ ಕುಮಾರ್ (38) ಮೃತಪಟ್ಟ ಬಸ್ ಚಾಲಕ ಎಂದು ಬಿಎಂಟಿಸಿ ಅಧಿಕಾರಿಗಳು ದೃಢಪಡಿಸಿದ್ದಾರೆ.
ಕರ್ತವ್ಯ ಮುಗಿಸಿ ಕೊನೆಯ ಸುತ್ತುವಳಿಯಲ್ಲಿ, ನೆಲಮಂಗಲದಿಂದ ದಾಸನಪುರ ಘಟಕಕ್ಕೆ ಬರುವಾಗ ಚಾಲಕ ಕಿರಣ್ಗೆ ಹಠಾತ್ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಡ್ರೈವರ್ ಸೀಟ್ನಿಂದ ಪಕ್ಕಕ್ಕೆ ಜಾರಿ ಬಿದ್ದಿದ್ದಾನೆ. ಚಲನೆಯಲ್ಲಿದ್ದ ಬಸ್, ಈ ವೇಳೆ ಪಕ್ಕದಲ್ಲಿದ್ದ ಮತ್ತೊಂದು ಬಿಎಂಟಿಸಿ ಬಸ್ಗೆ ಸ್ವಲ್ಪ ಡಿಕ್ಕಿ ಹೊಡೆದಿದೆ.
ಇದನ್ನು ಗಮನಿಸಿದ ನಿರ್ವಾಹಕ ಓಬಳೇಶ್ ಚಲಿಸುತ್ತಿದ್ದ ಬಸ್ ಕೂಡಲೇ ನಿಲ್ಲಿಸಿ ಚಾಲಕನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಕಿರಣ್ ಕುಮಾರ್ ಕೊನೆಯುಸಿರೆಳೆದಿದ್ದು, ಮರಣ ಹೊಂದಿರುವ ಬಗ್ಗೆ ವೈದ್ಯರು ಕೂಡ ಧೃಢಪಡಿಸಿದ್ದಾರೆ.
ಬಸ್ ರಸ್ತೆಯ ಒಂದು ಬದಿಗೆ ವಾಲುತ್ತಾ ಸಾಗಿತ್ತು. ಪಕ್ಕದಲ್ಲಿದ್ದ ಮತ್ತೊಂದು ಬಿಎಂಟಿಸಿ ಬಸ್ಗೆ ಸ್ಪಲ್ಪ ಡಿಕ್ಕಿಯೂ ಹೊಡೆದಿದೆ. ಇನ್ನೇನು ದೊಡ್ಡ ಪ್ರಮಾಣದ ಅನಾಹುತ ಸಂಭವಿಸಬೇಕು ಅನ್ನುವಷ್ಟರಲ್ಲೇ ನಿರ್ವಾಹಕ ಓಬಳೇಶ್ ಚಾಲಕನ ಸೀಟಿನಲ್ಲಿ ಕುಳಿತು ಬಸ್ ಅನ್ನು ತಕ್ಷಣ ನಿಲ್ಲಿಸಿದ್ದಾರೆ. ಮಾರ್ಗ ಸಂಖ್ಯೆ 256M/1, ವಾಹನ ಸಂಖ್ಯೆ F- 4007 ಆಗಿದ್ದು, ನಿರ್ವಾಹಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಡ್ರೈವರ್ ಕಿರಣ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಬಸ್ ಕಂಡಕ್ಟರ್ ಓಬ್ಳೇಶ್ ಸಂಚರಿಸುತ್ತಿದ್ದ ಬಸ್ ಅನ್ನು ನಿಲ್ಲಿಸಿ, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.@RLR_BTM @BMTC_BENGALURU#BMTCBusIncident #Bengaluru #BusConductor #BusDriver… pic.twitter.com/RGFQNaUA50
— NewsFirst Kannada (@NewsFirstKan) November 6, 2024
BMTC bus driver dies of heart attack while driving bus, video recorded. Timely presence of the bus conductor has saved many lives of the passengers. The video of this incident as gone viral on social media.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm