ಬ್ರೇಕಿಂಗ್ ನ್ಯೂಸ್
12-11-24 03:12 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹನ್ನೊಂದು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಬೆಳಗಾವಿ, ಹಾವೇರಿ, ದಾವಣಗೆರೆ, ಕಲಬುರಗಿ, ಮೈಸೂರು, ರಾಮನಗರ ಮತ್ತು ಧಾರವಾಡ ಸೇರಿದಂತೆ ಹಲವೆಡೆ ದಾಳಿ ನಡೆದಿದ್ದು, ಅಧಿಕಾರಿಗಳಿಗೆ ಸಂಬಂಧಿತ ದಾಖಲೆಗಳು, ಆಸ್ತಿ, ಬೆಲೆಬಾಳುವ ವಸ್ತುಗಳನ್ನು ಪರಿಶೀಲಿಸುತ್ತಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆಗೆ ದಾಳಿಯಾಗಿದೆ. ಅನುಕಂಪದ ಆಧಾರದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್ ರಾಜ್ ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣೆಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವೆಂಕಟೇಶ್ ಎಂಬವರ ಬೆಳಗಾವಿ ನಿವಾಸದ ಮೇಲೆ ದಾಳಿ ನಡೆದಿದೆ. ವೆಂಕಟೇಶ್ ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸಿದ್ದರು.
ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೀದರ್, ಬೆಂಗಳೂರು ನಿವಾಸ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ದಾಖಲೆ ಹಾಗೂ ಇನ್ನಿತರ ಮಾಹಿತಿ ಕಲೆ ಹಾಕಲಾಗಿದೆ.
ಹಾವೇರಿಯ ಬಸವೇಶ್ವರ ನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಉಪ ವಿಭಾಗದ ಎಇ ಕಾಶೀನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆದಿದ್ದು, 14 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಬೆಳಗ್ಗೆ ಮನೆಯಲ್ಲಿ ಮಲಗಿದ್ದ ಭಜಂತ್ರಿ, ಲೋಕಾಯುಕ್ತ ಅಧಿಕಾರಿಗಳ ದಾಳಿ ಸುಳಿವು ಸಿಗುತ್ತಿದ್ದಂತೆಯೇ ಸುಮಾರು 9 ಲಕ್ಷ ರೂ. ಹಣದ ಗಂಟನ್ನು ಕಿಟಿಕಿಯಿಂದ ಆಚೆ ಎಸೆದಿದ್ದಾರೆ. ಆದರೆ, ತಕ್ಷಣ ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದಿದ್ದಾರೆ.
ರಾಣೆಬೆನ್ನೂರು ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿರುವ ಜ್ಯೋತಿ ಶಿಗ್ಲಿ ಅವರ ಮನೆಗೆ ದಾಳಿಯಾಗಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
Karnataka Lokayukta on Tuesday morning launched surprise raids on nine government officials in different parts of the state. The simultaneous raids are underway in as many as 40 locations belonging to the suspects, officials said.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 07:13 pm
HK News Desk
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm