ಬ್ರೇಕಿಂಗ್ ನ್ಯೂಸ್
13-11-24 12:37 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.13: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಶಕದ ಬಳಿಕ ನಕ್ಸಲರ ಹೆಜ್ಜೆ ಗುರುತು ಕಂಡುಬಂದಿದೆ. ಕೊಪ್ಪ ತಾಲೂಕಿನ ಕಡೇಗುಂದಿ ಗ್ರಾಮದ ಒಂಟಿ ಮನೆಗೆ ನಕ್ಸಲ್ ನಾಯಕರಾದ ಮುಂಡಗಾರು ಲತಾ ಮತ್ತು ಜಯಣ್ಣ ಅವರಿದ್ದ ನಾಲ್ವರು ನಕ್ಸಲರು ಭೇಟಿ ಕೊಟ್ಟಿದ್ದನ್ನು ತಿಳಿದ ಎಎನ್ಎಫ್ ಪಡೆ ದಾಳಿ ನಡೆಸಿದ್ದು ನಕ್ಸಲರು ಕಾಡಿನಲ್ಲಿ ಪರಾರಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವೇಶದ ಗಡಿಗಳಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಇದೇ ವೇಳೆ, ಕಾಡಂಚಿನ ಗ್ರಾಮಗಳಲ್ಲಿ ಎಎನ್ಎಫ್ ಪಡೆಗಳಿಂದ ಕಾರ್ಯಾಚರಣೆ ತೀವ್ರಗೊಂಡಿದೆ. ಕುದುರೆಮುಖ ಮುಖ, ಆಗುಂಬೆ, ಕೆರೆಕಟ್ಟೆ, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲ ಮಾದರಿಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾರೆ.

ಶೃಂಗೇರಿ ಮತ್ತು ಕೊಪ್ಪ ತಾಲೂಕಿನ ಗಡಿಯಲ್ಲಿರುವ ಸುಬ್ಬಗೌಡ ಎಂಬವರ ಮನೆಗೆ ನಾಲ್ವರು ನಕ್ಸಲರು ಬಂದಿದ್ದಾರೆಂಬ ಮಾಹಿತಿ ಮೇರೆಗೆ ಎಎನ್ಎಫ್ ಪೊಲೀಸರು ದಾಳಿ ನಡೆಸಿದ್ದಾರೆ. ಇದಕ್ಕೂ ಮೊದಲೇ ನಕ್ಸಲರು ಕಾಡಿನೊಳಗೆ ಪರಾರಿಯಾಗಿದ್ದಾರೆ. ಮನೆಯಲ್ಲಿ ಮೂರು ಬಂದೂಕು, ಮದ್ದುಗುಂಡು, ಮಾಂಸ ಪತ್ತೆಯಾಗಿದೆ. ಮನೆಯಲ್ಲಿ ನೇತು ಹಾಕಿದ್ದ ಕ್ಯಾಲೆಂಡರ್ ಗೆ ನಕ್ಷತ್ರ ಮಾದರಿಯ ಗುರುತು ಹಾಕಿದ್ದು ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಮುಂಡಗಾರು ಲತಾ ನೇತೃತ್ವದ ನಾಲ್ವರು ಬಂದಿದ್ದರೆಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಜಯಪುರ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆ ನಿಗ್ರಹ ಕಾಯ್ದೆಯಡಿ (ಯುಎಪಿಎ) ಪ್ರಕರಣ ದಾಖಲಿಸಲಾಗಿದೆ.
ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ, ನಕ್ಸಲ್ ನಿಗ್ರಹ ಪಡೆಯ ಎಸ್ಪಿ ಜಿತೇಂದ್ರ ಕುಮಾರ್ ಭೇಟಿ ನೀಡಿದ್ದು ಕಾರ್ಯಾಚರಣೆ ಚುರುಕುಗೊಳಿಸಲು ಸೂಚಿಸಿದ್ದಾರೆ. ಸ್ಥಳಕ್ಕೆ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಪ್ರಣಬ್ ಮೊಹಂತಿ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿದ್ದಾರೆ.
The anti-naxal force (ANF) has launched an extensive combing operation in the Sringeri and Koppa taluks of Chikkamagaluru district on the basis of intelligence reports suggesting renewed Maoist activity in the area, officials familiar with the matter said, adding that two have been detained for questioning.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am