ಬ್ರೇಕಿಂಗ್ ನ್ಯೂಸ್
17-11-24 03:01 pm Bangalore Correspondent ಕರ್ನಾಟಕ
ಬೆಂಗಳೂರು, ನ,17: ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯ ಖಾಲಿ ಪ್ರದೇಶದಲ್ಲಿ ಕಾರಿನ ಒಳಗೆ ಕುಳಿತು ಬೆಂಕಿಹಚ್ಚಿಕೊಂಡು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ, ಉದ್ಯಮಿ ಪ್ರದೀಪ್ (42) ಆತ್ಮಹತ್ಯೆ ಮಾಡಿಕೊಂಡವರು.
ಶನಿವಾರ ಮಧ್ಯಾಹ್ನದ ವೇಳೆ ತಮ್ಮ ಸ್ಕೋಡಾ ಕಾರಿನಲ್ಲಿ ಬಂದಿದ್ದ ಪ್ರದೀಪ್ ಕಾರಿನಲ್ಲಿ ಕುಳಿತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರು ಸಂಪೂರ್ಣ ಭಸ್ಮವಾಗಿದೆ. ಮೃತದೇಹವು ಗುರುತಿಸಲಾರದಷ್ಟು ಸುಟ್ಟು ಹೋಗಿತ್ತು. ಕಾರು ಸಂಚರಿಸಿದ್ದ ಮಾರ್ಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧರಿಸಿ ಗುರುತು ಪತ್ತೆ ಮಾಡಲಾಯಿತು ಎಂದು ಪೊಲೀಸರು ಹೇಳಿದರು.
ಹೋಟೆಲ್ ಉದ್ಯಮದಲ್ಲಿ ಪ್ರದೀಪ್ ನಷ್ಟ ಅನುಭವಿಸಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಹೇಳಲಾಗಿದ್ದು, ನಿಖರ ಕಾರಣ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
'ಮುದ್ದಿನಪಾಳ್ಯಕ್ಕೆ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಕೋಡಾ ಕಾರಿನಲ್ಲಿ ಪ್ರದೀಪ್ ಬಂದಿದ್ದರು. ಕೆಲ ಸಮಯ ಕಾರಿನಲ್ಲೇ ಕುಳಿತಿದ್ದರು. ಅದಾದ ಮೇಲೆ ಕಾರು ಹೊತ್ತಿ ಉರಿಯಲು ಆರಂಭಿಸಿತ್ತು. ಸಮೀಪದ ಮನೆಯವರು ಕಾರಿಗೆ ಬೆಂಕಿ ಬಿದ್ದಿರುವುದನ್ನು ಗಮನಿಸಿ, ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ಬಂದಾಗ ಮಧ್ಯಾಹ್ನ 2.45 ಆಗಿತ್ತು. ಆ ವೇಳೆಗೆ ಕಾರು ಬಹುತೇಕ ಭಸ್ಮವಾಗಿತ್ತು. ಬೆಂಕಿ ನಂದಿಸಿದ ನಂತರ ಪರಿಶೀಲನೆ ನಡೆಸಿದಾಗ ಕಾರಿನ ಒಳಗೆ ಮೃತದೇಹ ಪತ್ತೆಯಾಗಿತ್ತು' ಎಂದು ಮೂಲಗಳು ತಿಳಿಸಿವೆ.
ಪೆಟ್ರೋಲ್ ಖರೀದಿ:
ಆತ್ಮಹತ್ಯೆ ಮಾಡಿ ಕೊಳ್ಳಲು ಉದ್ಯಮಿ ಪೆಟ್ರೋಲ್ ಖರೀದಿಸಿ ಬಾಟಲಿಯಲ್ಲಿ ತುಂಬಿಕೊಂಡು ಬಂದಿದ್ದರು ಎನ್ನಲಾಗಿದೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಘಟನೆಯ ಸಂಪೂರ್ಣ ದೃಶ್ಯ ಅಕ್ಕಪಕ್ಕದ ಮನೆಗಳಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ' ಎಂದು ಪೊಲೀಸರು ಹೇಳಿದರು.
ದೆಹಲಿ ನೋಂದಣಿ ಸಂಖ್ಯೆಯ ಸ್ಕೋಡಾ ಕಾರನ್ನು ಪ್ರದೀಪ್ ಅವರು ಇತ್ತೀಚೆಗಷ್ಟೇ ಖರೀದಿಸಿದ್ದರು. ಮಾಲೀಕತ್ವ ಇನ್ನೂ ಬದಲಾವಣೆ ಆಗಿರಲಿಲ್ಲ ಎಂದು ಮೂಲಗಳು ಹೇಳಿವೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
A 42-year-old businessman was found dead in his car after it was set on fire in a remote area of Bengaluru's Muddinpalya Saturday evening, police said.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm