ಬ್ರೇಕಿಂಗ್ ನ್ಯೂಸ್
20-11-24 09:57 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಶೋರೂಂನಲ್ಲಿ ಬೆಂಕಿ ಅನಾಹುತ ಸಂಭವಿಸಿ ಸೇಲ್ಸ್ ಮನ್ ಯುವತಿ ಸಜೀವ ದಹನವಾಗಿರುವ ಘಟನೆಯಿಂದ ರಾಜಧಾನಿ ಬೆಂಗಳೂರು ಬೆಚ್ಚಿಬಿದ್ದಿದೆ. ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಘಟನೆ ಸಂಬಂಧ ಯಾವುದೇ ಅಗ್ನಿ ಸುರಕ್ಷತೆ ಇಲ್ಲದೆ ಶೋರೂಂ ನಡೆಸುತ್ತಿದ್ದ ಮಾಲೀಕನನ್ನು ಪೊಲೀಸರು ಆದಷ್ಟು ಬೇಗ ಬಂಧಿಸಲಿ. ಮೃತ ಸಿಬ್ಬಂದಿಗೆ ಮಾಲೀಕರಿಂದಲೇ ದೇಣಿಗೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (NOC) ಪಡೆಯದ ಹಾಗೂ ಅಗ್ನಿ ನಂದಿಸುವ ಉಪಕರಣಗಳನ್ನು ಹೊಂದಿರದ, ಫೈರ್ ಡ್ರಿಲ್ ಮಾಡಿಸದ ಯಾವುದೇ ಶೋರೂಂಗಳು, ಶಾಲಾ ಕಾಲೇಜುಗಳು, ಗೋಡೌನ್ಗಳಿದ್ದರೆ ಅಂತಹ ಕಟ್ಟಡಗಳ ಲೈಸನ್ಸ್ ರದ್ದು ಪಡಿಸಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ.
ಫೈರ್ ಡ್ರಿಲ್ ಒಂದು ಮನೋರಂಜನಾ ಕಾರ್ಯವಾಗದೆ, ಕೆಲಸ ಮಾಡುವ ಸಿಬ್ಬಂದಿ ಅಗ್ನಿ ಆಕಸ್ಮಿಕ ಸಂಭವಿಸಿದರೆ ಹೇಗೆ ಎದುರಿಸಬೇಕು ಎಂಬುದನ್ನು ಸರಿಯಾಗಿ ಕಲಿತಿರಬೇಕು. ಫೈರ್ ಡ್ರಿಲ್ ಅನ್ನು ಆಸ್ಪತ್ರೆಗಳಲ್ಲಿ, ಅಗ್ನಿ ಸೂಕ್ಷ್ಮ ವಲಯಗಳಲ್ಲಿ, ಫ್ಯಾಕ್ಟರಿ, ಶಾಲಾ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಡಬೇಕು. ಅಗ್ನಿ ನಂದಿಸುವ ಉಪಕರಣಗಳು ಇಲ್ಲದಿದ್ದರೆ ಕೂಡಲೇ ಅಂತಹ ಕಚೇರಿ ಅಥವಾ ವ್ಯಾಪಾರ ವಹಿವಾಟು ಕೇಂದ್ರದ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಯತ್ನಾಳ್ ಸಲಹೆ ನೀಡಿದ್ದಾರೆ.
ಬೆಂಗಳೂರಿನ ರಾಜಾಜಿನಗರದಲ್ಲಿರುವ ಎಲೆಕ್ಟ್ರಿಕ್ ವಾಹನ ಶೋರೂಂನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದರಿಂದ ಶೋರೂಂ ಒಳಗಿದ್ದ ಯುವತಿ ದಾರುಣ ಮೃತಪಟ್ಟಿದ್ದರು. ಶೋರೂಂನಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ತಿಳಿದುಬಂದಿದೆ. ರಾಜಾಜಿನಗರದ ರಾಜ್ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಈ ಘಟನೆ ಸಂಭವಿಸಿತ್ತು. ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿದ್ದು, ಕೆಲವೇ ನಿಮಿಷಗಳಲ್ಲಿ ವಾಹನಗಳು ಹೊತ್ತಿ ಉರಿದಿದ್ದವು. ಈ ವೇಳೆ ಶೋರೂಂನಲ್ಲಿ ಸೇಲ್ಸ್ ಎಕ್ಸಿಕ್ಯುಟಿವ್ ಆಗಿ ಕೆಲಸ ಮಾಡುತ್ತಿದ್ದ 20 ವರ್ಷದ ಪ್ರಿಯಾ ಅಲ್ಲಿಂದ ಹೊರಬರಲಾರದೆ ಸಾವಿಗೀಡಾಗಿದ್ದಾರೆ.
Fire accident at two wheeler electric showroom in Bangalore, yatnal demands cancellation of lisence.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm