ಬ್ರೇಕಿಂಗ್ ನ್ಯೂಸ್
20-11-24 09:57 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಶೋರೂಂನಲ್ಲಿ ಬೆಂಕಿ ಅನಾಹುತ ಸಂಭವಿಸಿ ಸೇಲ್ಸ್ ಮನ್ ಯುವತಿ ಸಜೀವ ದಹನವಾಗಿರುವ ಘಟನೆಯಿಂದ ರಾಜಧಾನಿ ಬೆಂಗಳೂರು ಬೆಚ್ಚಿಬಿದ್ದಿದೆ. ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಘಟನೆ ಸಂಬಂಧ ಯಾವುದೇ ಅಗ್ನಿ ಸುರಕ್ಷತೆ ಇಲ್ಲದೆ ಶೋರೂಂ ನಡೆಸುತ್ತಿದ್ದ ಮಾಲೀಕನನ್ನು ಪೊಲೀಸರು ಆದಷ್ಟು ಬೇಗ ಬಂಧಿಸಲಿ. ಮೃತ ಸಿಬ್ಬಂದಿಗೆ ಮಾಲೀಕರಿಂದಲೇ ದೇಣಿಗೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (NOC) ಪಡೆಯದ ಹಾಗೂ ಅಗ್ನಿ ನಂದಿಸುವ ಉಪಕರಣಗಳನ್ನು ಹೊಂದಿರದ, ಫೈರ್ ಡ್ರಿಲ್ ಮಾಡಿಸದ ಯಾವುದೇ ಶೋರೂಂಗಳು, ಶಾಲಾ ಕಾಲೇಜುಗಳು, ಗೋಡೌನ್ಗಳಿದ್ದರೆ ಅಂತಹ ಕಟ್ಟಡಗಳ ಲೈಸನ್ಸ್ ರದ್ದು ಪಡಿಸಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ.
ಫೈರ್ ಡ್ರಿಲ್ ಒಂದು ಮನೋರಂಜನಾ ಕಾರ್ಯವಾಗದೆ, ಕೆಲಸ ಮಾಡುವ ಸಿಬ್ಬಂದಿ ಅಗ್ನಿ ಆಕಸ್ಮಿಕ ಸಂಭವಿಸಿದರೆ ಹೇಗೆ ಎದುರಿಸಬೇಕು ಎಂಬುದನ್ನು ಸರಿಯಾಗಿ ಕಲಿತಿರಬೇಕು. ಫೈರ್ ಡ್ರಿಲ್ ಅನ್ನು ಆಸ್ಪತ್ರೆಗಳಲ್ಲಿ, ಅಗ್ನಿ ಸೂಕ್ಷ್ಮ ವಲಯಗಳಲ್ಲಿ, ಫ್ಯಾಕ್ಟರಿ, ಶಾಲಾ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಡಬೇಕು. ಅಗ್ನಿ ನಂದಿಸುವ ಉಪಕರಣಗಳು ಇಲ್ಲದಿದ್ದರೆ ಕೂಡಲೇ ಅಂತಹ ಕಚೇರಿ ಅಥವಾ ವ್ಯಾಪಾರ ವಹಿವಾಟು ಕೇಂದ್ರದ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಯತ್ನಾಳ್ ಸಲಹೆ ನೀಡಿದ್ದಾರೆ.
ಬೆಂಗಳೂರಿನ ರಾಜಾಜಿನಗರದಲ್ಲಿರುವ ಎಲೆಕ್ಟ್ರಿಕ್ ವಾಹನ ಶೋರೂಂನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದರಿಂದ ಶೋರೂಂ ಒಳಗಿದ್ದ ಯುವತಿ ದಾರುಣ ಮೃತಪಟ್ಟಿದ್ದರು. ಶೋರೂಂನಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ತಿಳಿದುಬಂದಿದೆ. ರಾಜಾಜಿನಗರದ ರಾಜ್ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಈ ಘಟನೆ ಸಂಭವಿಸಿತ್ತು. ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿದ್ದು, ಕೆಲವೇ ನಿಮಿಷಗಳಲ್ಲಿ ವಾಹನಗಳು ಹೊತ್ತಿ ಉರಿದಿದ್ದವು. ಈ ವೇಳೆ ಶೋರೂಂನಲ್ಲಿ ಸೇಲ್ಸ್ ಎಕ್ಸಿಕ್ಯುಟಿವ್ ಆಗಿ ಕೆಲಸ ಮಾಡುತ್ತಿದ್ದ 20 ವರ್ಷದ ಪ್ರಿಯಾ ಅಲ್ಲಿಂದ ಹೊರಬರಲಾರದೆ ಸಾವಿಗೀಡಾಗಿದ್ದಾರೆ.
Fire accident at two wheeler electric showroom in Bangalore, yatnal demands cancellation of lisence.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm