ಬ್ರೇಕಿಂಗ್ ನ್ಯೂಸ್
26-11-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ನ 26: “ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟಿಸ್ ನೀಡಲಾಗುವುದು” ಎಂದು ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.
ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಬಗ್ಗೆ ಅಂಬೇಡ್ಕರ್ ಭವನದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು:
“ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟಿಸ್ ನೀಡುತ್ತೇವೆ. ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು, ಎಂತಹುದ್ದೇ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು. ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಭೇಟಿ ನೀಡುತ್ತಿರುವುದು ಮಹದಾಯಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಹಾಗೂ ಆ ಭಾಗದ ಸಂಸದರನ್ನು ಭೇಟಿಯಾಗಲು. ಜೊತೆಗೆ ಜಾರ್ಖಂಡ್ನಲ್ಲಿ ಹೇಮಂತ್ ಸೊರೆನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುವುದು. ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿರುವ ಹಿನ್ನೆಲೆ ಆ ಕಾರ್ಯಕ್ರಮದ ರೂಪುರೇಷೆ ವಿಚಾರವಾಗಿ ಚರ್ಚೆ ಮಾಡಲು ತೆರಳುತ್ತಿದ್ದೇನೆ” ಎಂದು ತಿಳಿಸಿದರು.
Congress MLA H.R. Gaviyappa has stirred controversy by suggesting the cancellation of two state guarantee schemes, citing a lack of grants for his Hospet constituency in Vijayanagar district.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm