ಬ್ರೇಕಿಂಗ್ ನ್ಯೂಸ್
14-12-20 12:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಸಾರಿಗೆ ನೌಕರರ ಮುಷ್ಕರವನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೈಜಾಕ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರ ಆಕ್ರೋಶ ಈಗ ಕೋಡಿಹಳ್ಳಿ ವಿರುದ್ಧ ತಿರುಗಿಬಿದ್ದಿದೆ. ತಮ್ಮ ಮೊಡುತನ, ಪ್ರತಿಷ್ಠೆಗೆ ಕಾರ್ಮಿಕರನ್ನು ಬಲಿಯಾಗಿಸಿದ್ದಾರೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಕೋಡಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳ ಪೈಕಿ ಪ್ರಮುಖವಾಗಿರುವ ಎಐಟಿಯುಸಿ ನಾಯಕ ಅನಂತ ಸುಬ್ಬರಾವ್, ಕೋಡಿಹಳ್ಳಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಡಿಹಳ್ಳಿಯವರೇ ಡೀಲ್ ಮಾಡುವುದು ಬಿಟ್ಟು ಲೀಡರ್ ಆಗಿ ಕೆಲಸ ಮಾಡಿ. ನೀವು ಹೀಗೆ ವರ್ತಿಸುವುದನ್ನು ನೋಡಿದರೆ ಇದರ ಹಿಂದೆ ಏನೋ ಅಜೆಂಡಾ ಇಟ್ಟುಕೊಂಡಿರುವ ಸಂಶಯ ಕಾಣುತ್ತಿದೆ. ಅವರ ಒಣಪ್ರತಿಷ್ಠೆಗೆ ಸಾರಿಗೆ ನೌಕರರು ಬಲಿಯಾಗಬೇಕಾಗಿದೆ. ಕೋಡಿಹಳ್ಳಿ ಅವರದ್ದೇನು ಮೊನೋಪಾಲಿನಾ ಎಂದು ಸುಬ್ಬರಾವ್ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರತಿಭಟನೆ ಮಾಡಲು ಹೊರಟ ಕಾರ್ಮಿಕರನ್ನು ದಾರಿ ತಪ್ಪಿಸಿ ಅವರಿಂದ ದಿಢೀರ್ ಮುಷ್ಕರ ಮಾಡಿಸಿದ್ದಾರೆ. ಸಂಘಟನೆ ಕಟ್ಟಿ ಬೆಳೆಸೋದು ಸಾಮಾನ್ಯ ಸಂಗತಿಯಲ್ಲ. ಈ ಕೋಡಿಹಳ್ಳಿ ಎಂದಾದರೂ ಕಾರ್ಮಿಕ ಸಂಘಟನೆ ಕಟ್ಟಿದ್ದಾರೆಯೇ, ಕಾರ್ಮಿಕ ಕಾನೂನುಗಳ ಅರಿವು ಹೊಂದಿದ್ದಾರೆಯೇ.. ಕೋಡಿಹಳ್ಳಿಯವರ ಹಿನ್ನೆಲೆ ನೋಡಿದರೆ ಅವರು ಖಾಸಗಿಯವರ ಪರ ಇದ್ದವರೇ ಹೊರತು ಸಾರ್ವಜನಿಕ ಸಂಸ್ಥೆಗಳ ಪರ ಇದ್ದವರಲ್ಲ. ಇವರು ಖಾಸಗಿ ಲಾಬಿಯ ಪರ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಇದರ ಹಿಂದೇನೂ ಏನೋ ಡೀಲ್ ಮಾಡುತ್ತಿರುವ ಬಗ್ಗೆ ಸಂಶಯ ಬರುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆಯೇ ಮಾತುಕತೆ ನಡೆಸಿದ ಬಳಿಕ ನಮ್ಮ ಸಂಘಟನೆಯ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇವೆ. ಕೋಡಿಹಳ್ಳಿ ಮಾತು ಕಟ್ಟಿಕೊಂಡು ಇಂದು ಕೂಡ ಮುಷ್ಕರ ಮುಂದವರಿಸಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅನಂತ ಸುಬ್ಬರಾವ್ ಕಾರ್ಮಿಕರನ್ನು ಎಚ್ಚರಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm