ಬ್ರೇಕಿಂಗ್ ನ್ಯೂಸ್
01-12-24 10:56 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಡಿ 01: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ. ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ.
ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜನರು ಓಡಿಸಲು ಹರಸಾಹಸಪಟ್ಟರು. ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪುತ್ತೂರು ಎ.ಸಿ.ಜುಬಿನ್ ಮೊಹಪಾತ್ರ ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಆನೆ ಓಡಾಡಿರುವ ದೃಶ್ಯಗಳನ್ನು ಕೆಲವರು ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದು, ಸಿಸಿಟಿವಿಯಲ್ಲೂ ಚಲನವಲನ ದಾಖಲಾಗಿದೆ.
ಡಿ.7ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ, ಡಿ.4ರಂದು ಶೇಷ ವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ತೈಲಾಭ್ಯಂಜನ ದಿನ. ಅಂದೇ ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.8ರಂದು ಅವಭ್ರತೋತ್ಸವ ಮತ್ತು ನೌಕವಿಹಾರ, ಡಿ.12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.
Wild Elephant found moving near kukke temple in Mangalore, forest officlas issue warning to devotees.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm