ಬ್ರೇಕಿಂಗ್ ನ್ಯೂಸ್
05-12-24 11:02 am HK News Desk ಕರ್ನಾಟಕ
ಹಾಸನ, ಡಿ 5: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್ ಈಗ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್-ಬಿಜೆಪಿ ಎರಡಕ್ಕೂ ಟಕ್ಕರ್ ಕೊಡಲು ‘ಕೈ’ ತಂತ್ರ ಹೂಡಿದ್ದು, ಎಲ್ಲರ ಚಿತ್ತ ಅತ್ತ ನೆಟ್ಟಿದೆ.
ಬೆಳಗ್ಗೆ 11.30ಕ್ಕೆ ಹಾಸನದಲ್ಲಿ ಜನಕಲ್ಯಾಣ ಸಮಾವೇಶ ಉದ್ಘಾಟನೆ ಆಗಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಇಡೀ ಸಚಿವ ಸಂಪುಟ ದಂಡೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. 480 ಅಡಿ ಅಗಲ ಮತ್ತು 600 ಅಡಿ ಉದ್ದದ ಬೃಹತ್ ಟೆಂಟ್ ಹಾಕಲಾಗಿದೆ. ಸುಮಾರು 70 ಸಾವಿರ ಜನರು ಕೂರಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಬಿಗಿ ಭದ್ರತೆ, ಹೆಚ್ಚುವರಿ ಪೊಲೀಸ್ ನಿಯೋಜನೆ ;
ಲಕ್ಷಾಂತರ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ, ಪೊಲೀಸ್ ಇಲಾಖೆ ಸಾಕಷ್ಟು ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಐವರು ಎಸ್ಪಿಗಳು, ಆರು ಎಎಸ್ಪಿಗಳು, 12 ಡಿವೈಎಸ್ಪಿ, 50ಕ್ಕೂಹೆಚ್ಚು ಸಿಪಿಐ, 80ಕ್ಕೂ ಹೆಚ್ಚು ಪಿಎಸ್ಐಗಳು ಸೇರಿ ಎರಡು ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಈ ಇಡೀ ಸಮಾವೇಶದ ಪ್ರಮುಖ ಗುರಿಯೇ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಎನ್ನಲಾಗುತ್ತಿದೆ. ಇದಕ್ಕಾಗಿ ದೊಡ್ಡಗೌಡರ ತವರು ಜಿಲ್ಲೆ, ಕರ್ಮಭೂಮಿ, ಜೆಡಿಎಸ್ ಭದ್ರಕೋಟೆ ಹಾಸನದಿಂದಲೇ ಸಮಾವೇಶ ಏರ್ಪಡಿಸಲಾಗಿದೆ. ಹಳೆ ಮೈಸೂರಿನಲ್ಲಿ ಜೆಡಿಎಸ್ ಜೊತೆ ನೈತ್ರಿ ಮಾಡಿಕೊಂಡು ಬಿಜೆಪಿ ನೆಲೆಯೂರುತ್ತಿರುವುದನ್ನು ತಡೆದು ತಮ್ಮ ಪಕ್ಷದ ಹಿಡಿತ ಸಾಧಿಸುವುದು ಈ ಸಮಾವೇಶದ ಹಿಡನ್ ಅಜೆಂಡಾ ಎಂಬ ಚರ್ಚೆ ಇದೆ. ಅಹಿಂದ ವರ್ಗವನ್ನು ಒಗ್ಗೂಡಿಸಿ ಹಳೆ ಮೈಸೂರು ಭಾಗವನ್ನ ಕಬ್ಜ ಮಾಡುವ ರಣತಂತ್ರ ಎನ್ನಲಾಗುತ್ತಿದೆ.
ಉಪಚುನಾವಣೆ ಗೆಲುವಿನ ರಣೋತ್ಸಾಹದಲ್ಲಿರುವ ಕಾಂಗ್ರೆಸ್, ವಿಪಕ್ಷಗಳ ಮೇಲೆ ಸವಾರಿ ಮಾಡಲು ಹೊರಟಿದೆ. ತನ್ನ ಶಕ್ತಿಯನ್ನ ಮತ್ತಷ್ಟು ಹೆಚ್ಚಿಸಿಕೊಳ್ಳಲು ಮುಂದಾಗಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಗಳು ನಡೆಯುತ್ತಿವೆ. ಹಾಸನದಲ್ಲಿ ಎಲ್ಲೆಡೆ ಕೈ ನಾಯಕರ ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ಕಾಂಗ್ರೆಸ್ ಬಾವುಟಗಳು ಹಾರಾಡುತ್ತಿವೆ
ಇನ್ನು ಜೆಡಿಎಸ್ ಭದ್ರಕೋಟೆಯಲ್ಲಿ ನಡೆಯುತ್ತಿರುವ ಸಮಾವೇಶದ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಹೆಚ್ಡಿ ರೇವಣ್ಣ, ಇಂತಹ ಎಷ್ಟು ಸಮಾವೇಶ ನೋಡಿಲ್ಲ, ಸಮಾವೇಶ ಮಾಡಲಿ ನಾವೇನು ಹೆದರಲ್ಲ. ನಮ್ಮನ್ನ ಮುಗಿಸುವುದು ದೇವರು ಮಾತ್ರ, ಅಭಿವೃದ್ಧಿ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಒಟ್ಟಿನಲ್ಲಿ ಜೆಡಿಎಸ್ ಭದ್ರಕೋಟೆಯಲ್ಲಿ ಕೈ ಶಕ್ತಿ ಪ್ರದರ್ಶನಕ್ಕೆ ಹಾಸನ ಸಜ್ಜಾಗಿದೆ. ವಿಪಕ್ಷಗಳ ಆರೋಪಗಳಿಗೆ ಉತ್ತರ ನೀಡಲೆಂದೇ ನಡೆಯುತ್ತಿರುವ ಸಮಾವೇಶದಲ್ಲಿ ನಾಯಕರ ತಿರುಗೇಟು ಹೇಗಿರಲಿದೆ ಎಂಬ ಕುತೂಹಲ ಮೂಡಿದೆ.
Congress rally in Hassan, lakhs of congress members to join the rally. The Congress has planned a rally in Karnataka’s Hassan on Thursday, with a two-pronged strategy – it marks an attempt to build on a strong performance in the recently held bypolls and signals a strategic move by Karnataka Chief Minister Siddaramaiah and his deputy DK Shivakumar to train their guns at their political rivals and settle some old scores.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm