ಬ್ರೇಕಿಂಗ್ ನ್ಯೂಸ್
05-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಹಣ ಪಡೆದು ಬಿಡುಗಡೆ ಮಾಡಿರುವ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್ ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋಗಿದ್ದಾಗ ಆತ ಗಾಂಜಾ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಕಷ್ಟಪಟ್ಟು ವಶಕ್ಕೆ ತೆಗೆದುಕೊಂಡು ಠಾಣೆಗೆ ಎಳೆತಂದಿದ್ದರು.


ಆದರೆ ಠಾಣೆಯಲ್ಲಿ ಆರೋಪಿಯನ್ನು ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸದೆ ಆತನಿಂದಲೇ ಹಣ ಪಡೆದು ದೂರನ್ನೂ ದಾಖಲಿಸದೇ ಬಿಡುಗಡೆ ಮಾಡಲಾಗಿತ್ತು. ಠಾಣೆಯ ಇನ್ಸ್ ಪೆಕ್ಟರ್ ಮುತ್ತುರಾಜ್ ಮತ್ತು ಕೆಲವು ಸಿಬಂದಿ ಕೃತ್ಯದಲ್ಲಿ ಶಾಮೀಲಾಗಿದ್ದರು. ಈ ಕುರಿತು ಠಾಣೆಯ ಸಿಬಂದಿಯೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್, ಈ ಬಗ್ಗೆ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ಅವರಿಗೆ ತನಿಖೆಗೆ ಸೂಚಿಸಿದ್ದರು.
ಎಸಿಪಿ ಸತೀಶ್ ಕುಮಾರ್ ಪ್ರಕರಣ ಬಗ್ಗೆ ಎಲ್ಲ ಸಿಬಂದಿಯನ್ನೂ ವಿಚಾರಣೆ ನಡೆಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡುಬಂದಿದೆ ಎಂದು ವರದಿ ನೀಡಿದ್ದರು. ವರದಿ ಆಧರಿಸಿ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐಗಳಾದ ಮಹೇಶ್ ಹಾಗೂ ಫೈರೋಜ್ ಖಾನ್, ಹೆಡ್ ಕಾನ್ಸ್ಟೇಬಲ್ ಮಂಜುನಾಥ್, ಕಾನ್ಸ್ಟೇಬಲ್ ಬಸವರಾಜ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
Bangalore Ramamurthy Nagar police station inspector Muthuraj and five others suspended over corruption. The staff of the police station had recently sent an unsigned letter to the police commissioner listing out numerous allegations about Muthuraj.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm