ಬ್ರೇಕಿಂಗ್ ನ್ಯೂಸ್
05-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಹಣ ಪಡೆದು ಬಿಡುಗಡೆ ಮಾಡಿರುವ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್ ಸೇರಿದಂತೆ 6 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋಗಿದ್ದಾಗ ಆತ ಗಾಂಜಾ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಕಷ್ಟಪಟ್ಟು ವಶಕ್ಕೆ ತೆಗೆದುಕೊಂಡು ಠಾಣೆಗೆ ಎಳೆತಂದಿದ್ದರು.


ಆದರೆ ಠಾಣೆಯಲ್ಲಿ ಆರೋಪಿಯನ್ನು ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸದೆ ಆತನಿಂದಲೇ ಹಣ ಪಡೆದು ದೂರನ್ನೂ ದಾಖಲಿಸದೇ ಬಿಡುಗಡೆ ಮಾಡಲಾಗಿತ್ತು. ಠಾಣೆಯ ಇನ್ಸ್ ಪೆಕ್ಟರ್ ಮುತ್ತುರಾಜ್ ಮತ್ತು ಕೆಲವು ಸಿಬಂದಿ ಕೃತ್ಯದಲ್ಲಿ ಶಾಮೀಲಾಗಿದ್ದರು. ಈ ಕುರಿತು ಠಾಣೆಯ ಸಿಬಂದಿಯೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್, ಈ ಬಗ್ಗೆ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಕುಮಾರ್ ಅವರಿಗೆ ತನಿಖೆಗೆ ಸೂಚಿಸಿದ್ದರು.
ಎಸಿಪಿ ಸತೀಶ್ ಕುಮಾರ್ ಪ್ರಕರಣ ಬಗ್ಗೆ ಎಲ್ಲ ಸಿಬಂದಿಯನ್ನೂ ವಿಚಾರಣೆ ನಡೆಸಿದಾಗ ಆರೋಪದಲ್ಲಿ ಸತ್ಯಾಂಶ ಕಂಡುಬಂದಿದೆ ಎಂದು ವರದಿ ನೀಡಿದ್ದರು. ವರದಿ ಆಧರಿಸಿ ಠಾಣೆಯ ಇನ್ಸ್ಪೆಕ್ಟರ್ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐಗಳಾದ ಮಹೇಶ್ ಹಾಗೂ ಫೈರೋಜ್ ಖಾನ್, ಹೆಡ್ ಕಾನ್ಸ್ಟೇಬಲ್ ಮಂಜುನಾಥ್, ಕಾನ್ಸ್ಟೇಬಲ್ ಬಸವರಾಜ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
Bangalore Ramamurthy Nagar police station inspector Muthuraj and five others suspended over corruption. The staff of the police station had recently sent an unsigned letter to the police commissioner listing out numerous allegations about Muthuraj.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm