ಬ್ರೇಕಿಂಗ್ ನ್ಯೂಸ್
14-12-20 04:16 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ತಯಾರಿ ನಡೆಸಿದೆ. ಈಗಾಗ್ಲೇ ಅವಿಶ್ವಾಸ ಗೊತ್ತುವಳಿ ನೋಟೀಸ್ ನೀಡಿದ್ದು, ನಾಳೆ (ಮಂಗಳವಾರ) ನಡೆಯಲಿರುವ ಒಂದು ದಿನದ ಅಧಿವೇಶನದಲ್ಲಿ ಸಭಾಪತಿಯನ್ನು ತೆರವು ಮಾಡುವುದೇ ಬಿಜೆಪಿ ವನ್ ಲೈನ್ ಅಜೆಂಡಾ ಎನ್ನಲಾಗುತ್ತಿದೆ.
ಕಳೆದ ಗುರುವಾರ ಪರಿಷತ್ ಕಲಾಪವನ್ನು ದಿಢೀರ್ ಆಗಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದರು. ಪ್ರತಾಪರ ಈ ನಡೆ ಬಿಜೆಪಿಗೆ ಮುಖಕ್ಕೆ ಹೊಡೆದ ರೀತಿ ಆಗಿತ್ತು. ಹೀಗಾಗಿ ವಿಶೇಷ ಸದನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರನ್ನು ಒತ್ತಾಯ ಮಾಡಿತ್ತು. ಅವಿಶ್ವಾಸ ನೋಟೀಸ್ ನೀಡಿ, 15 ದಿನಗಳಾಗಿದ್ದು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿತ್ತು.
ಆದರೆ, ಪ್ರತಾಪಚಂದ್ರ ಶೆಟ್ಟಿ ತಮ್ಮ ವಿರುದ್ಧದ ಅವಿಶ್ವಾಸ ಗೊತ್ತುವಳಿ ನೋಟೀಸ್ ನಲ್ಲಿ ತಾಂತ್ರಿಕ ಸಮಸ್ಯೆಗಳಿದ್ದು, ಕಾನೂನು ಸಲಹೆ ಪಡೆದು ಮುಂದುವರಿಯುವುದಾಗಿ ಹೇಳಿದ್ದರು. ಈ ವಿಧಾನ ಪರಿಷತ್ ಮೂಲಗಳು, ಸಭಾಪತಿಯ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾದರೆ, ಅದನ್ನು ಖುದ್ದಾಗಿ ಎದುರಿಸಬೇಕು. ಸದನವೇ ಸರ್ವೋಚ್ಚವಾಗಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಆಗಬೇಕು ಎನ್ನಲಾಗುತ್ತಿದೆ.

ಈ ನಡುವೆ, ಪರಿಷತ್ ಸಭಾಪತಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ಬೆಂಬಲವನ್ನೂ ಪಡೆದಿದೆ. ಕಾಂಗ್ರೆಸ್- ಜೆಡಿಎಸ್ ಸಂಬಂಧ ಹಳಸಿರುವುದರಿಂದ ಜೆಡಿಎಸ್ ನಾಯಕರು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ. ಈ ವಿಚಾರ ಪರಿಷತ್ ಸಭಾಪತಿಯನ್ನು ಬದಲಾಯಿಸಲು ಸಹಕಾರ ಆಗಲಿದೆ.
ಈ ನಡುವೆ, ಕಳೆದ ವಾರ ವಿಧಾನಸಭೆ ಅಂಗೀಕರಿಸಿದ್ದ ಗೋಹತ್ಯೆ ವಿಚಾರವೂ ಪರಿಷತ್ ಕಲಾಪದಲ್ಲಿ ಅಂಗೀಕಾರ ಆಗಬೇಕಿದೆ. ಆದರೆ, ಅದನ್ನು ಪರಿಷತ್ ಕಲಾಪದಲ್ಲಿ ಮೊನ್ನೆ ಮಂಡನೆ ಮಾಡಿಲ್ಲ. ಅದು ಕೂಡ ಬಿಜೆಪಿ ಪಾಲಿಗೆ ಮಹತ್ವದ್ದಾಗಿದ್ದು, ಪರಿಷತ್ತಿನಲ್ಲಿ ಮಂಡನೆಯಾಗಿ ಅನುಮೋದನೆ ಪಡೆಯದಿದ್ದರೆ ಕಾನೂನಾಗಿ ಬರುವುದಿಲ್ಲ. ಮುಂದಿನ ಅಧಿವೇಶನಕ್ಕಾಗಿ ಕಾಯಬೇಕಾಗುತ್ತದೆ. ಹೀಗಾಗಿ ಮಂಗಳವಾರದ ಒಂದು ದಿನದ ಅಧಿವೇಶನದಲ್ಲಿ ಬಿಜೆಪಿ ಪಾಲಿಗೆ ಎರಡು ವಿಚಾರವೂ ಮಹತ್ವದ್ದಾಗಿದೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಕೂಡ ಸಭಾಪತಿ ಸ್ಥಾನ ಉಳಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಮೊದಲಿಗೆ ಮಂಡನೆಯಾಗಿ ಗದ್ದಲ ಏರ್ಪಟ್ಟರೆ, ಕಲಾಪವನ್ನು ಮತ್ತೆ ಮುಂದೂಡುವ ತಂತ್ರವೂ ಅಡಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm