ಬ್ರೇಕಿಂಗ್ ನ್ಯೂಸ್
14-12-20 04:16 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ತಯಾರಿ ನಡೆಸಿದೆ. ಈಗಾಗ್ಲೇ ಅವಿಶ್ವಾಸ ಗೊತ್ತುವಳಿ ನೋಟೀಸ್ ನೀಡಿದ್ದು, ನಾಳೆ (ಮಂಗಳವಾರ) ನಡೆಯಲಿರುವ ಒಂದು ದಿನದ ಅಧಿವೇಶನದಲ್ಲಿ ಸಭಾಪತಿಯನ್ನು ತೆರವು ಮಾಡುವುದೇ ಬಿಜೆಪಿ ವನ್ ಲೈನ್ ಅಜೆಂಡಾ ಎನ್ನಲಾಗುತ್ತಿದೆ.
ಕಳೆದ ಗುರುವಾರ ಪರಿಷತ್ ಕಲಾಪವನ್ನು ದಿಢೀರ್ ಆಗಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದರು. ಪ್ರತಾಪರ ಈ ನಡೆ ಬಿಜೆಪಿಗೆ ಮುಖಕ್ಕೆ ಹೊಡೆದ ರೀತಿ ಆಗಿತ್ತು. ಹೀಗಾಗಿ ವಿಶೇಷ ಸದನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರನ್ನು ಒತ್ತಾಯ ಮಾಡಿತ್ತು. ಅವಿಶ್ವಾಸ ನೋಟೀಸ್ ನೀಡಿ, 15 ದಿನಗಳಾಗಿದ್ದು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿತ್ತು.
ಆದರೆ, ಪ್ರತಾಪಚಂದ್ರ ಶೆಟ್ಟಿ ತಮ್ಮ ವಿರುದ್ಧದ ಅವಿಶ್ವಾಸ ಗೊತ್ತುವಳಿ ನೋಟೀಸ್ ನಲ್ಲಿ ತಾಂತ್ರಿಕ ಸಮಸ್ಯೆಗಳಿದ್ದು, ಕಾನೂನು ಸಲಹೆ ಪಡೆದು ಮುಂದುವರಿಯುವುದಾಗಿ ಹೇಳಿದ್ದರು. ಈ ವಿಧಾನ ಪರಿಷತ್ ಮೂಲಗಳು, ಸಭಾಪತಿಯ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾದರೆ, ಅದನ್ನು ಖುದ್ದಾಗಿ ಎದುರಿಸಬೇಕು. ಸದನವೇ ಸರ್ವೋಚ್ಚವಾಗಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಆಗಬೇಕು ಎನ್ನಲಾಗುತ್ತಿದೆ.

ಈ ನಡುವೆ, ಪರಿಷತ್ ಸಭಾಪತಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ಬೆಂಬಲವನ್ನೂ ಪಡೆದಿದೆ. ಕಾಂಗ್ರೆಸ್- ಜೆಡಿಎಸ್ ಸಂಬಂಧ ಹಳಸಿರುವುದರಿಂದ ಜೆಡಿಎಸ್ ನಾಯಕರು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ. ಈ ವಿಚಾರ ಪರಿಷತ್ ಸಭಾಪತಿಯನ್ನು ಬದಲಾಯಿಸಲು ಸಹಕಾರ ಆಗಲಿದೆ.
ಈ ನಡುವೆ, ಕಳೆದ ವಾರ ವಿಧಾನಸಭೆ ಅಂಗೀಕರಿಸಿದ್ದ ಗೋಹತ್ಯೆ ವಿಚಾರವೂ ಪರಿಷತ್ ಕಲಾಪದಲ್ಲಿ ಅಂಗೀಕಾರ ಆಗಬೇಕಿದೆ. ಆದರೆ, ಅದನ್ನು ಪರಿಷತ್ ಕಲಾಪದಲ್ಲಿ ಮೊನ್ನೆ ಮಂಡನೆ ಮಾಡಿಲ್ಲ. ಅದು ಕೂಡ ಬಿಜೆಪಿ ಪಾಲಿಗೆ ಮಹತ್ವದ್ದಾಗಿದ್ದು, ಪರಿಷತ್ತಿನಲ್ಲಿ ಮಂಡನೆಯಾಗಿ ಅನುಮೋದನೆ ಪಡೆಯದಿದ್ದರೆ ಕಾನೂನಾಗಿ ಬರುವುದಿಲ್ಲ. ಮುಂದಿನ ಅಧಿವೇಶನಕ್ಕಾಗಿ ಕಾಯಬೇಕಾಗುತ್ತದೆ. ಹೀಗಾಗಿ ಮಂಗಳವಾರದ ಒಂದು ದಿನದ ಅಧಿವೇಶನದಲ್ಲಿ ಬಿಜೆಪಿ ಪಾಲಿಗೆ ಎರಡು ವಿಚಾರವೂ ಮಹತ್ವದ್ದಾಗಿದೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಕೂಡ ಸಭಾಪತಿ ಸ್ಥಾನ ಉಳಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಮೊದಲಿಗೆ ಮಂಡನೆಯಾಗಿ ಗದ್ದಲ ಏರ್ಪಟ್ಟರೆ, ಕಲಾಪವನ್ನು ಮತ್ತೆ ಮುಂದೂಡುವ ತಂತ್ರವೂ ಅಡಗಿದೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am