ಬ್ರೇಕಿಂಗ್ ನ್ಯೂಸ್
07-12-24 03:57 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಕೋವಿಡ್ ಅಕ್ರಮದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತು ವಿಧಾನಸೌಧದಲ್ಲಿ ಉಪಸಮಿತಿಯು ಶನಿವಾರ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.
ನಮ್ಮ ಸರ್ಕಾರ ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು ಮಾಡುತ್ತಿದ್ದೇವೆ. ಉಳಿದಂತೆ ಸಮಿತಿ ವರದಿಯ ಶಿಫಾರಸ್ಸಿನಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಮತ್ತೊಂದು ಕಡೆ ಇಲಾಖೆಯಲ್ಲಿ ಅಧಿಕಾರಿಗಳ ವಿರುದ್ಧವೂ ವಿಚಾರಣೆ ನಡೆಯಲಿದೆ. ಕೆಲವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಎಷ್ಟು ಪ್ರಕರಣ ದಾಖಲಾಗುತ್ತವೋ ಗೊತ್ತಿಲ್ಲ ಎಂದರು.
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ನಡೆದಿಲ್ಲ ಎಂದು ವರದಿ ನೀಡಿದ್ದನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಮತ್ತೆ ತನಿಖೆಯಾಗಬೇಕು. ನಾನು ಹಾಗೂ ಸಿದ್ದರಾಮಯ್ಯ ಅವರೇ ಆ ಆಸ್ಪತ್ರೆಗೆ ಹೋಗಿ ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿದ್ದೆವು. 36 ಜನ ಸತ್ತರೆ, ಆಗಿನ ಸಚಿವರು ಕೇವಲ ಮೂರು ಮಂದಿ ಸತ್ತಿದ್ದರು ಎಂದು ಹೇಳಿದ್ದರು. ನಾನು ಮೃತಪಟ್ಟ 36 ಮಂದಿಯ ಮನೆಗಳಿಗೆ ಭೇಟಿ ನೀಡಿದ್ದೇನೆ. ಈ ವಿಚಾರವಾಗಿ ಬೆಳಗಾವಿಯಲ್ಲಿ ಸಭೆ ಮಾಡಿ ಈ ವಿಚಾರಣೆ ಪ್ರಕ್ರಿಯೆ ಪರಿಶೀಲಿಸುತ್ತೇವೆ. ಈ ಸಮಿತಿಯು ಅಧಿಕಾರಿಗಳ ವಿಚಾರಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ಹೇಳಿದರು.
ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ 84 ಲಕ್ಷ ಆರ್ಟಿಪಿಸಿಆರ್ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿ 502 ಕೋಟಿ ಬಿಲ್ ಮಾಡಿದ್ದಾರೆ. 400 ಕೋಟಿ ಪಾವತಿ ಮಾಡಲಾಗಿದೆ. 84 ಲಕ್ಷ ಎಂದರೆ ಬೆಂಗಳೂರಿನಲ್ಲಿರುವ ಪ್ರತಿ ಮನೆಗೆ ಇಬ್ಬರಿಗೆ ಪರೀಕ್ಷೆ ಮಾಡಿರಬೇಕು. ಕಿದ್ವಾಯಿ ಸಂಸ್ಥೆಯೊಂದರಲ್ಲೇ 24 ಲಕ್ಷ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿದ್ದಾರೆ. ತಾಂತ್ರಿಕವಾಗಿ ಸಮರ್ಥವಿಲ್ಲದೆ, ಐಸಿಎಂಆರ್ ಅನುಮತಿ ಇಲ್ಲದೆ ಪರೀಕ್ಷೆ ನಡೆಸಲಾಗಿದೆ. 146 ಕೋಟಿ ಬಿಲ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 24 ಲಕ್ಷ ಜನರಿಗೆ ಒಂದೇ ಕಡೆ ಪರೀಕ್ಷೆ ಎಂದರೆ ಅಲ್ಲಿ ಎಷ್ಟು ಜನದಟ್ಟಣೆ, ಸರದಿ ಸಾಲು ಇರಬೇಕು. ಹೀಗಾಗಿ ಈ ವಿಚಾರದಲ್ಲಿ ವಿಧಾನಸೌಧದಿಂದ ಕೆಳ ಹಂತದವರೆಗೂ ಯಾವ ರೀತಿ ಪ್ರಕ್ರಿಯೆ ಮಾಡಿದ್ದಾರೆ. ಕಾನೂನು ಚೌಕಟ್ಟು ಮೀರಿ ಏನೆಲ್ಲಾ ತೀರ್ಮಾನ ಮಾಡಿದ್ದಾರೆ ಎಂಬುದರ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದಾರೆ. ಈ ವರದಿಯನ್ನು ನಾವು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.
Authorities are investigating the Covid irregularities as per the recommendations of Justice Michael D'Cunha's committee. DCM D.K. Shivakumar said that those who embezzled Covid money will not be spared.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm