ಬ್ರೇಕಿಂಗ್ ನ್ಯೂಸ್
07-12-24 05:09 pm HK News Desk ಕರ್ನಾಟಕ
ಹಾವೇರಿ, ಡಿ 07: ಪ್ರೀತಿಸಲು ಯುವತಿ ಒಪ್ಪಲಿಲ್ಲವೆಂಬ ಕಾರಣಕ್ಕೆ ನೊಂದಿದ್ದ ಯುವಕ ಬೆಂಕಿ ಹಚ್ಚಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ತಡಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರವೀಣ ಬೆಟದೂರು (25) ಆತ್ಮಹತ್ಯೆಗೆ ಶರಣಾದ ಯುವಕ.
ಹುಬ್ಬಳ್ಳಿ ತಾಲ್ಲೂಕಿನ ಬೆಳಗಲಿ ಗ್ರಾಮದ ಪ್ರವೀಣ, ಹಣ್ಣಿನ ವ್ಯಾಪಾರ ಮಾಡುತ್ತಿದ್ದರು.
ತಡಸ ಗ್ರಾಮದ ತಾಯವ್ವ ದೇವಿ ದೇವಸ್ಥಾನದ ಬಳಿ ಬಂದಿದ್ದ ಪ್ರವೀಣ, ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ತೀವ್ರ ಗಾಯಗೊಂಡಿದ್ದ ಇವರನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ' ಎಂದು ತಡಸ ಪೊಲೀಸರು ಹೇಳಿದರು.
ಪ್ರವೀಣ ಸಾವಿನ ಸಂಬಂಧ ಯುಡಿಆರ್ (ಅಸಹಜ ಸಾವು) ದಾಖಲಿಸಿಕೊಳ್ಳಲಾಗಿದೆ. ಚಿಕಿತ್ಸೆ ಸಂದರ್ಭದಲ್ಲಿ ಪ್ರವೀಣ ಅವರಿಂದ ಹೇಳಿಕೆ ಸಹ ಪಡೆಯಲಾಗಿದ್ದು, ಅದನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ' ಎಂದು ತಿಳಿಸಿದರು.
ಪ್ರವೀಣ್ ಅವರು ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ 21 ವರ್ಷದ ಯುವತಿ ಜೊತೆ ಸ್ನೇಹ ಬೆಳೆಸಿದ್ದರು. ನರ್ಸಿಂಗ್ ಕಾಲೇಜ್ವೊಂದರಲ್ಲಿ ಯುವತಿ ಓದುತ್ತಿದ್ದರು. ಇಬ್ಬರೂ ಆಗಾಗ ಪರಸ್ಪರ ಭೇಟಿಯಾಗುತ್ತಿದ್ದರು' ಎಂದು ಪೊಲೀಸ್ ಮೂಲಗಳು ಹೇಳಿವೆ.
ಇತ್ತೀಚೆಗೆ ಯುವತಿ ಜೊತೆಗೆ ಮಾತನಾಡಿದ ಪ್ರವೀಣ್, ತಮ್ಮನ್ನು ಪ್ರೀತಿಸುವಂತೆ ಕೋರಿದ್ದರು. ಆದರೆ, ಯುವತಿ ತಮ್ಮ ಭವಿಷ್ಯದ ದೃಷ್ಟಿಯಿಂದ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಪ್ರವೀಣ ಬೇಸರಗೊಂಡಿದ್ದರು. ತಮ್ಮನ್ನು ಪ್ರೀತಿಸುವಂತೆ ಪಟ್ಟು ಹಿಡಿದಿದ್ದರು.
ಶುಕ್ರವಾರ ಬೆಳಿಗ್ಗೆ ಯುವತಿಯನ್ನು ಪ್ರವೀಣ ಭೇಟಿಯಾಗಿದ್ದರು. ಮಾತನಾಡಬೇಕೆಂದು ಹೇಳಿ ಯುವತಿಯನ್ನು ತಡಸ ಬಳಿಯ ತಾಯವ್ವ ದೇವಸ್ಥಾನದ ಸಮೀಪದಲ್ಲಿ ಕರೆತಂದಿದ್ದರು. ಯುವತಿಗೆ ಗೊತ್ತಾಗದಂತೆ, ಮಾರ್ಗಮಧ್ಯೆಯೇ ಬಂಕ್ನಿಂದ ಬಾಟಲಿಯಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು
ತಮ್ಮನ್ನು ಪ್ರೀತಿಸುವಂತೆ ಪ್ರವೀಣ ಪುನಃ ಕೋರಿದ್ದರು. ಆದರೆ, ಅದಕ್ಕೆ ಯುವತಿ ಒಪ್ಪಿರಲಿಲ್ಲ. ನಮ್ಮದು ಸ್ನೇಹವಷ್ಟೇ ಎಂಬುದಾಗಿ ಹೇಳಿದ್ದರು. ಅದರಿಂದ ಬೇಸರಗೊಂಡು ಕೂಗಾಡಿದ್ದ ಪ್ರವೀಣ, ಬಾಟಲಿಯಲ್ಲಿದ್ದ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡಿದ್ದರು. ಬಳಿಕ, ಬೆಂಕಿ ಹಚ್ಚಿಕೊಂಡಿದ್ದರು. ಸ್ಥಳೀಯರು ಸಹಾಯಕ್ಕೆ ಹೋಗುವಷ್ಟರಲ್ಲಿ, ಇಡೀ ದೇಹಕ್ಕೆ ಬೆಂಕಿ ವ್ಯಾಪಿಸಿತ್ತು. ಬೆಂಕಿ ನಂದಿಸಿ, ಪ್ರವೀಣ್ ಅವರನ್ನು ಕಿಮ್ಸ್ಗೆ ದಾಖಲಿಸಲಾಗಿತ್ತು' ಎಂದು ಮೂಲಗಳು ತಿಳಿಸಿವೆ.
Haveri youth sets himself on fire after girl rejects his love proposal. The Deceased has been identified as Praveen.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am