ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm