ಬ್ರೇಕಿಂಗ್ ನ್ಯೂಸ್
09-12-24 05:08 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 09: ಹೋಟೆಲ್ ಫ್ರಾಂಚೈಸಿ ನೀಡುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ "ಇಡ್ಲಿ ಗುರು" ಹೋಟೆಲ್ ಮಾಲೀಕ ಸೇರಿ ನಾಲ್ವರ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಈ ಸಂಬಂಧ ಕಾಮಾಕ್ಷಿಪಾಳ್ಯ ನಿವಾಸಿ ಚೇತನ್ ಎಂಬವರು ನೀಡಿದ ದೂರಿನ ಮೇರೆಗೆ ಇಡ್ಲಿ ಗುರು ಹೋಟೆಲ್ ಮಾಲೀಕ ಕಾರ್ತಿಕ್ ಶೆಟ್ಟಿ, ಅವರ ಪತ್ನಿ ಮಂಜುಳಾ, ಕಾರ್ತಿಕ್ ತಂದೆ ಬಾಬು ಶೆಟ್ಟಿ ಹಾಗೂ ಹೋಟೆಲ್ ಸಿಬ್ಬಂದಿ ದಿವಾಕರ್ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
2022ರ ಅಕ್ಟೋಬರ್ನಲ್ಲಿ ದೂರುದಾರ ಚೇತನ್ ಮಾಗಡಿ ಮುಖ್ಯರಸ್ತೆಯ ಕೊಟ್ಟಿಗೆಪಾಳ್ಯದಲ್ಲಿರುವ ಇಡ್ಲಿಗುರು ಕಚೇರಿಗೆ ಭೇಟಿ ನೀಡಿ, ಸಂಸ್ಥೆಯ ಬಗ್ಗೆ ಕಾರ್ತಿಕ್ನಿಂದ ಮಾಹಿತಿ ಪಡೆದುಕೊಂಡರು.

ಈ ವೇಳೆ ಆರೋಪಿಗಳು ತಿಂಗಳಿಗೆ 50 ಸಾವಿರ ರೂ. ಸಂಪಾದಿಸಬಹುದು ಎಂದು ತಿಳಿಸಿ, ಆರಂಭದಲ್ಲಿ ನಮ್ಮ ಹೋಟೆಲ್ ಫ್ರಾಂಚೈಸಿ ನೀಡುವುದಾಗಿ ಚೇತನ್ಗೆ ನಂಬಿಸಿದ್ದರು. ಅದಕ್ಕಾಗಿ ಠೇವಣಿ ರೂಪದಲ್ಲಿ 3 ಲಕ್ಷ ರೂ. ಪಡೆದಿದ್ದಾರೆ.
ಹೋಟೆಲ್ಗಾಗಿ ಬಾಡಿಗೆ ಅಂಗಡಿ ಖಾಲಿ ಮಾಡಿಸಿದ್ದ ಚೇತನ್:
ಆರೋಪಿಗಳ ಸಲಹೆ ಮೇರೆಗೆ ಚೇತನ್, ತಮ್ಮ ಮನೆಯ ನೆಲಮಹಡಿಯಲ್ಲಿದ್ದ 9 ಸಾವಿರ ರೂ. ಬಾಡಿಗೆ ಬರುತ್ತಿದ್ದ ಅಂಗಡಿಯನ್ನು ಖಾಲಿ ಮಾಡಿಸಿದ್ದರು. ಈ ಜಾಗದಲ್ಲಿ ಇಡ್ಲಿ ಗುರು ನಡೆಸಲು ಕಾರ್ತಿಕ್ ಒಪ್ಪಿಕೊಂಡಿದ್ದರು. ಹೀಗಾಗಿ ಅಂಗಡಿಯನ್ನು ಹೋಟೆಲ್ ನಡೆಸಲು ಬೇಕಾದ ವಿನ್ಯಾಸಕ್ಕೆ ಬದಲಾಯಿಸಲಾಗಿತ್ತು. ಅದಕ್ಕೆ ಎರಡು ಲಕ್ಷ ರೂ. ವ್ಯಯಿಸಲಾಗಿತ್ತು. ಆದರೆ, ಆರೋಪಿಗಳು ಹೋಟೆಲ್ನ ಬದಲಾಗಿ ಫುಡ್ ಕಾರ್ಟ್(ಮೊಬೈಲ್ ಕ್ಯಾಂಟಿನ್) ತಂದು ನಿಲ್ಲಿಸಿ ಸ್ವಲ್ಪ ದಿನಗಳ ಬಳಿಕ ಅಂದು ಕೊಂಡಂತೆ ವ್ಯಾಪಾರ ಆಗುತ್ತಿಲ್ಲ. ಬೇರೆಡೆ ವ್ಯಾಪಾರ ಮಾಡೋಣ ಎಂದಿದ್ದ ಆರೋಪಿಗಳು, ನಂತರ ಶೇ.10 ಕಮಿಷನ್ ನೀಡುವುದಾಗಿ ನಂಬಿಸಿದ್ದರು. ಆದರೆ, ಯಾವುದೇ ಕಮಿಷನ್ ನೀಡದೆ, ನಿಗದಿತ ಅಂಗಡಿಯಲ್ಲಿ ಹೋಟೆಲ್ ನಡೆಸದೆ, ಹೋಟೆಲ್ಗಾಗಿ ಅಂಗಡಿಯನ್ನು ಮರು ವಿನ್ಯಾಸ ಮಾಡಿದ ಹಣ ಸೇರಿ 5 ಲಕ್ಷ ರೂ. ಆಗಿದೆ. ಈ ಬಗ್ಗೆ ಆರೋಪಿಗಳನ್ನು ವಿಚಾರಿಸಿದಾಗ ನಾಲ್ವರು ಆರೋಪಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಚೇತನ್ ದೂರಿನಲ್ಲಿ ಆರೋಪಿಸಿದ್ದಾರೆ. ಮತ್ತೂಂದೆಡೆ ಆರೋಪಿಗಳು ಇದೇ ರೀತಿ ಹತ್ತಾರು ಮಂದಿಗೆ ವಂಚಿಸಿದ್ದಾರೆ ಎಂಬುದು ಗೊತ್ತಾಗಿದೆ.
ಸದ್ಯ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರಿಂದ ಶೋಧ ನಡೆದಿದೆ.
Bangalore Idli Guru owner Karthik Shetty has been cheating people by promising to give franchise of idli guru. The Vile Parle police have registered a case against a con man for allegedly cheating a 50-year-old businessman of Rs 23 lakh on the pretext of providing him the restaurant chain franchise of ‘Idly Guru’.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am