ಬ್ರೇಕಿಂಗ್ ನ್ಯೂಸ್
10-12-24 11:48 am Bangalore Correspondent ಕರ್ನಾಟಕ
ಬೆಂಗಳೂರು, ಡಿ.10: ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಿದೆ.
ಕೃಷ್ಣ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಡಿ.11ರ ಬುಧವಾರ ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಗ್ರಾಮದಲ್ಲಿ ನಡೆಯಲಿದ್ದು ಅವರ ಗೌರವಾರ್ಥ ರಾಜ್ಯದಲ್ಲಿ ಒಂದು ದಿನ ಎಲ್ಲ ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರಂತೆ, ಎಲ್ಲ ಮಾದರಿಯ ಸರ್ಕಾರಿ ಕಚೇರಿಗಳು ಹಾಗೂ ಎಲ್ಲಾ ಖಾಸಗಿ, ಅನುದಾನಿತ ಶಾಲಾ ಕಾಲೇಜುಗಳಿಗೆ ಡಿ.11ರಂದು ರಜೆ ನೀಡಲಾಗಿದೆ.
ಇದಲ್ಲದೆ, ಡಿ.10ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಇರಲಿದ್ದು ಇದರ ಅಂಗವಾಗಿ ಈ ಅವಧಿಯಲ್ಲಿ ಎಲ್ಲ ರಾಜ್ಯ ಸರ್ಕಾರದ ಕಟ್ಟಡಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸುವುದು ಮತ್ತು ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಈ ಬಗ್ಗೆ ಸರ್ಕಾರದ ಉಪ ಕಾರ್ಯದರ್ಶಿ ಎಲಿಷಾ ಆಂಡ್ರೂಸ್ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಮತ್ತು ಎಸ್ಸೆಂ ಕೃಷ್ಣ ಕೊನೆಗಾಲದಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ್ದರಿಂದ ಅವರ ನಿಧನಕ್ಕೆ ಶೋಕಾಚರಣೆ ಮಾಡುತ್ತಾರೆಯೇ ಎಂಬ ಬಗ್ಗೆ ಸಂಶಯ ಇತ್ತು. ಸಿದ್ದರಾಮಯ್ಯ ಸರ್ಕಾರ ಅದರ ಬಗ್ಗೆ ತಾರತಮ್ಯ ಮಾಡದೆ ಶೋಕಾಚರಣೆ ಘೋಷಣೆ ಮಾಡಿದೆ. ಆದೇಶ ಪ್ರಕಾರ, ಬೆಳಗಾವಿ ಅಧಿವೇಶನಕ್ಕೂ ಕತ್ತರಿ ಬೀಳಲಿದೆ. ಸ್ಪೀಕರ್ ಯುಟಿ ಖಾದರ್ ಅವರ ಆಪ್ತ ಕಾರ್ಯದರ್ಶಿಯನ್ನು ಸಂಪರ್ಕಿಸಿದಾಗ, ಡಿ.11ರ ಒಂದು ದಿನ ಮಾತ್ರ ಅಧಿವೇಶನಕ್ಕೆ ರಜೆ ಇರುತ್ತದೆ ಎಂದು ತಿಳಿಸಿದ್ದಾರೆ.
The Karnataka government will observe three days of mourning following the death of former Chief Minister SM Krishna, who passed away at the age of 92 due to prolonged illness. His last rites will be conducted with full state honours, and no functions or celebrations will be held during this period.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm