ಬ್ರೇಕಿಂಗ್ ನ್ಯೂಸ್
10-12-24 10:03 pm HK News Desk ಕರ್ನಾಟಕ
ಭಟ್ಕಳ, ಡಿ 10: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದಾರೆ.
ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಈ ಪೈಕಿ ಓರ್ವ ವಿದ್ಯಾರ್ಥಿನಿ ಶ್ರಾವಂತಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಕಾರ್ಯ ನಡೆದಿದೆ.
ಮುರುಡೇಶ್ವರ ಬೀಚ್ನಲ್ಲಿ ಇಂದು ಸಂಜೆ ಆಟವಾಡುತ್ತಿದ್ದಾಗ ಏಕಾಏಕಿ ಏಳು ವಿದ್ಯಾರ್ಥಿನಿಯರು ಕೊಚ್ಚಿಕೊಂಡು ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇನ್ನುಳಿದಂತೆ ದೀಕ್ಷ, ಲಾವಣ್ಯ, ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.
ರಕ್ಷಿಸಲಾಗದೆ ಅಸಹಾಯಕರಾದ ಲೈಫ್ ಗಾರ್ಡ್ಸ್ ;
ಇನ್ನು ಕಳೆದ ಎರಡು ತಿಂಗಳಿನಿಂದ ಯಾವುದೇ ಸಲಕರಣೆ ಪೂರೈಸದ ಹಿನ್ನೆಲೆಯಲ್ಲಿ ಮಕ್ಕಳನ್ನ ರಕ್ಷಿಸಲಾಗದೆ ಲೈಫ್ ಗಾರ್ಡ್ಸ್ ಅಸಹಾಯಕರಾಗಿದ್ದಾರೆ. ಲೈಫ್ ಗಾರ್ಡ್ ಗಳಿಗೆ ಅಗತ್ಯ ಸಲಕರಣೆ ಒದಗಿಸುವಂತೆ ಸುದ್ದಿ ಮಾಡಿದ್ದರೂ ಸಹ ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೆವೆ ಸಲಕರಣೆ ಸಮಸ್ಯೆ ಬಗೆಹರಿಸುವ ಅಶ್ವಾಸನೆಯನ್ನು ಸಚಿವ ಮಂಕಾಳು ವೈದ್ಯ ನೀಡಿದ್ದರು. ಆದ್ರೆ ಅದು ಭರವಸೆಯಾಗಿಯೇ ಉಳಿದಿದೆ.
ಕೆಲವು ದಿನಗಳ ಹಿಂದೆ ಮುರುಡೇಶ್ವರದಲ್ಲಿ ಪ್ರವಾಸಿಗರು ಸಮುದ್ರ ಪಾಲಾಗಿದ್ದರು. ಆದರೂ ಸಹ ಅಗತ್ಯ ಸಲಕರಣೆ ಇಲ್ಲದ ಕಾರಣ ಲೈಫ್ ಗಾರ್ಡ್ಸ್ಗಳು ಸಮುದ್ರಕ್ಕೆ ಇಳಿದಿರಲಿಲ್ಲ. ಹೀಗಾಗಿ ತಾಲೂಕಾಡಳಿತ ಪ್ರವಾಸಿಗರನ್ನು ಕಡಲ ತೀರಕ್ಕೆ ನಿರ್ಬಂಧಿಸಿತ್ತು. ಬಳಿಕ ಕಳೆದ ಒಂದು ತಿಂಗಳಿನಿಂದ ನಿರ್ಬಂಧ ತೆರವುಗೊಳಿಸಿತ್ತು. ಆದ್ರೆ ಸುರಕ್ಷತೆ ಕ್ರಮ ಕೈಗೊಂಡಿಲ್ಲ.
For girl students drawn at beach in murudeshwara in bhatkal. Among which the lifeguards have found one dead body and the search is going on for 3 others.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm