ಬ್ರೇಕಿಂಗ್ ನ್ಯೂಸ್
11-12-24 07:28 pm HK News Desk ಕರ್ನಾಟಕ
ಮಂಡ್ಯ, ಡಿ 11: ನಿನ್ನೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಇಹಲೋಕ ತ್ಯಜಿಸಿದ್ದಾರೆ. ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನವಾಯಿತು.
ಪಂಚಭೂತಗಳಲ್ಲಿ ಲೀನವಾದ ಎಸ್ಎಂಕೆ


ಕಾಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯದ ಪ್ರಕಾರ ಭಾನು ಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಅಂತ್ಯಕ್ರಿಯೆಯ ಸಾಂಪ್ರಾದಾಯಿಕ ವಿಧಿವಿಧಾನ ಕಾರ್ಯ ನಡೆಯಿತು. ಮೊದಲು ಪುಣ್ಯಾಹ, ಬಳಿಕ ಪಂಚಗವ್ಯ, ಸ್ನಾನ, ಸ್ನಾನದ ಬಳಿಕ ಕರ್ಣ ಮಂತ್ರ ಪಾರಾಯಣ, ಉತ್ಕ್ರಾಂತ ತಿಲಪಾತ್ರ ದಾನ, ಗೋದಾನ, ದಶದಾನ ಮಾಡಲಾಯಿತು. ಆ ಬಳಿಕ ಪಾರ್ಥೀವ ಶರೀರಕ್ಕೆ ಮೊಮ್ಮಗ ಅಮೃರ್ತ್ಯ ಹೆಗಡೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ಎಸ್ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನವಾದರು.



ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ
ಅಂತ್ಯಸಂಸ್ಕಾರದ ಸ್ಥಳದಲ್ಲಿ ಗಣ್ಯರಿಗೆ ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30 ಗಂಟೆಗೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಾನು ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನಡೆಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರೆವೇರಿಸಲಾಯಿತು. ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ ಮಾಡಲಾಯಿತು. 300 ಕೆಜಿ ಸೇವಂತಿಗೆ, ಗುಲಾಬಿ ಹಾಗೂ ಚೆಂಡು ಹೂವು ಬಳಕೆ ಮಾಡಲಾಗಿದೆ.

ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ
ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅವರ ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ ನಡೆಸಲಾಯಿತು. ಈತ ಬೇರೆಯಾರೂ ಅಲ್ಲ ಉದ್ಯಮಿ ಸಿದ್ದಾರ್ಥ ಅವರ ಪುತ್ರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಳಿಯನೇ ಅಮಾರ್ಥ್ಯ ಹೆಗ್ಡೆ.
ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದ ಕೃಷ್ಣ
ಎಸ್ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
The mortal remains of former chief minister S M Krishna, who passed away due to an illness in Bengaluru, on Tuesday, was brought to his native Somanahalli, in Maddur taluk, Mandya district, on Wednesday afternoon.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm