ಬ್ರೇಕಿಂಗ್ ನ್ಯೂಸ್
12-12-24 10:36 pm HK News Desk ಕರ್ನಾಟಕ
ಕಾರ್ಕಳ, ಡಿ.12: ಶಬರಿಮಲೆಗೆ ಲಕ್ಷಾಂತರ ಹಿಂದೂ ಭಕ್ತರು ಪ್ರತಿ ವರ್ಷ ಮಾಲಾಧಾರಿಯಾಗಿ ವ್ರತ ನಿಷ್ಠರಾಗಿ ತೆರಳುವುದು ವಾಡಿಕೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗ್ರಾಮದ ಗೋಕುಲನಗರ ನಿವಾಸಿ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಅಯ್ಯಪ್ಪನ ಭಕ್ತಿಯಲ್ಲಿ ಮಾಲಾಧಾರಿಯಾಗಿ ತೆರಳುವುದನ್ನು ವಾಡಿಕೆ ಮಾಡಿದ್ದಾನೆ.
ದಿ. ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ 18 ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿರುವ ಅಜಿತ್, 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವರಿಂದ ಪ್ರಭಾವಿತರಾಗಿ ಮಾಲೆ ಧರಿಸಿದ್ದರು.
ಆನಂತರ, ಕೊರೊನಾ ಸಂದರ್ಭದಲ್ಲೂ ಅಯ್ಯಪ್ಪನ ಯಾತ್ರೆ ಹೋಗುವುದನ್ನು ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ನಡೆದುಕೊಂಡೇ ಸಾಗಿ ಅಯ್ಯಪ್ಪನ ದರ್ಶನ ಮಾಡಿದ್ದರು. ತಂದೆ ತೀರಿಕೊಂಡ ವರ್ಷದಲ್ಲಿ ಮಾತ್ರ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ವ್ಯಸನ ಮುಕ್ತನಾಗಿ ಬದುಕಲು ಈ ಮಾಲಾಧಾರಿಯಾಗಿ ವ್ರತ ನಿಷ್ಠನಾಗುತ್ತೇನೆ ಎನ್ನುತ್ತಾರೆ ಅಜಿತ್ ಸೆರಾವೋ. ಪ್ರತಿ ವರ್ಷ ಮಕರ ಜ್ಯೋತಿಯಂದು ಅಜಿತ್ ಶಬರಿಮಲೆಗೆ ತೆರಳಿ ಅಯ್ಯಪ್ಪ ಜ್ಯೋತಿಯನ್ನು ಕಣ್ತುಂಬಿಕೊಳ್ಳುತ್ತಾರೆ.
It is a tradition for lakhs of Hindu devotees to visit Sabarimala every year as Maladharis to observe the fast. Ajit Serao, a Christian youth from Gokulnagar, Sankalkaria village in Karkala taluk, has also made it a habit to visit as Maladhari in devotion to Lord Ayyappa.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm