ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm