ಬ್ರೇಕಿಂಗ್ ನ್ಯೂಸ್
16-12-24 09:58 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.16: ಕಾನೂನು ಹೇಳಿಕೊಡಬೇಕಾದ ಸ್ಥಾನದಲ್ಲಿರುವ ಇನ್ಸ್ಪೆಕ್ಟರ್ ಒಬ್ಬ ತನ್ನ ಠಾಣೆಯ ಮಹಿಳಾ ಸಿಬ್ಬಂದಿಗೆ ರಾತ್ರಿಯೆಲ್ಲ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಎಂಬವರ ವಿರುದ್ಧ ಠಾಣೆಯ ಮಹಿಳಾ ಸಿಬಂದಿ, ಗೃಹ ಸಚಿವ ಮತ್ತು ಡಿಜಿಪಿಗೆ ಪತ್ರ ಬರೆದು ಅಳಲು ತೋಡಿಕೊಡಿದ್ದಾರೆ.
ಸುರೇಶ್ ರಾತ್ರಿಯಾದರೆ ಠಾಣೆಯ ಮಹಿಳಾ ಸಿಬ್ಬಂದಿಗಳಿಗೆ ವಿಡಿಯೋ ಕರೆ ಮಾಡಿ ಕಾಮ ಪ್ರಚೋದಕ ಮಾತುಗಳನ್ನು ಆಡುತ್ತಾರೆ. ಕೆಟ್ಟದಾಗಿ ಅಸಹ್ಯ ಪದಗಳನ್ನು ಬಳಸಿಕೊಂಡು ಮಾತನಾಡುತ್ತಾರೆ. ಠಾಣೆಯಲ್ಲಿ ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿ ಮಹಿಳಾ ಆಯೋಗಕ್ಕೂ ಸಿಬಂದಿ ಪತ್ರ ಬರೆದಿದ್ದಾರೆ.
ಇನ್ಸ್ ಪೆಕ್ಟರ್ ಸುರೇಶ್ ಯಳ್ಳೂರ ವಿರುದ್ಧ ಮೂರು ಪುಟಗಳಷ್ಟು ದೂರು ಬರೆದಿದ್ದು ರಾತ್ರಿಯಾದ್ರೆ ವಿಡಿಯೋ ಕಾಲ್ ಮಾಡಿ ನಮ್ಮ ಜೊತೆಗೆ ಕೆಟ್ಟದಾಗಿ ಮಾತನಾಡುತ್ತಾರೆ. ವಿಡಿಯೋ ಕಾಲ್ನಲ್ಲಿ ಸರಿಯಾಗಿ ಮಾತನಾಡದೆ ಹೋದ್ರೆ ವಿನಾಕಾರಣ ಕಿರುಕುಳ ಕೊಡುತ್ತಾರೆ. ಇನ್ಸ್ಪೆಕ್ಟರ್ನಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡುವಂತಾಗಿದೆ. ಇನ್ಸ್ಪೆಕ್ಟರ್ನಿಂದ ನಮಗೆ ಮುಕ್ತಿ ಕೊಡಿಸಿ ಎಂದು ಪತ್ರದ ಮೂಲಕ ಮಹಿಳಾ ಸಿಬಂದಿ ಕೇಳಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಡಿಜಿ&ಐಜಿಪಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, ಹಳೇ ಹುಬ್ಬಳ್ಳಿ ಪಿಐ ಸುರೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ಮಾಡಿಸುತ್ತೇನೆ. ನನಗೆ ಯಾವ ಪತ್ರವೂ ಬಂದಿಲ್ಲ. ಆದ್ರೆ ಈ ವಿಚಾರ ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸತ್ಯಾಸತ್ಯತೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.
Woman police complain of sexually harrasment by Hubballi Old police station inspector suresh yallaru. The staff has alleged that the inspector videos calls staffs at night and also misbehaves when staffs go to his cabin.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm