ಬ್ರೇಕಿಂಗ್ ನ್ಯೂಸ್
16-12-24 09:58 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.16: ಕಾನೂನು ಹೇಳಿಕೊಡಬೇಕಾದ ಸ್ಥಾನದಲ್ಲಿರುವ ಇನ್ಸ್ಪೆಕ್ಟರ್ ಒಬ್ಬ ತನ್ನ ಠಾಣೆಯ ಮಹಿಳಾ ಸಿಬ್ಬಂದಿಗೆ ರಾತ್ರಿಯೆಲ್ಲ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಎಂಬವರ ವಿರುದ್ಧ ಠಾಣೆಯ ಮಹಿಳಾ ಸಿಬಂದಿ, ಗೃಹ ಸಚಿವ ಮತ್ತು ಡಿಜಿಪಿಗೆ ಪತ್ರ ಬರೆದು ಅಳಲು ತೋಡಿಕೊಡಿದ್ದಾರೆ.
ಸುರೇಶ್ ರಾತ್ರಿಯಾದರೆ ಠಾಣೆಯ ಮಹಿಳಾ ಸಿಬ್ಬಂದಿಗಳಿಗೆ ವಿಡಿಯೋ ಕರೆ ಮಾಡಿ ಕಾಮ ಪ್ರಚೋದಕ ಮಾತುಗಳನ್ನು ಆಡುತ್ತಾರೆ. ಕೆಟ್ಟದಾಗಿ ಅಸಹ್ಯ ಪದಗಳನ್ನು ಬಳಸಿಕೊಂಡು ಮಾತನಾಡುತ್ತಾರೆ. ಠಾಣೆಯಲ್ಲಿ ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿ ಮಹಿಳಾ ಆಯೋಗಕ್ಕೂ ಸಿಬಂದಿ ಪತ್ರ ಬರೆದಿದ್ದಾರೆ.
ಇನ್ಸ್ ಪೆಕ್ಟರ್ ಸುರೇಶ್ ಯಳ್ಳೂರ ವಿರುದ್ಧ ಮೂರು ಪುಟಗಳಷ್ಟು ದೂರು ಬರೆದಿದ್ದು ರಾತ್ರಿಯಾದ್ರೆ ವಿಡಿಯೋ ಕಾಲ್ ಮಾಡಿ ನಮ್ಮ ಜೊತೆಗೆ ಕೆಟ್ಟದಾಗಿ ಮಾತನಾಡುತ್ತಾರೆ. ವಿಡಿಯೋ ಕಾಲ್ನಲ್ಲಿ ಸರಿಯಾಗಿ ಮಾತನಾಡದೆ ಹೋದ್ರೆ ವಿನಾಕಾರಣ ಕಿರುಕುಳ ಕೊಡುತ್ತಾರೆ. ಇನ್ಸ್ಪೆಕ್ಟರ್ನಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡುವಂತಾಗಿದೆ. ಇನ್ಸ್ಪೆಕ್ಟರ್ನಿಂದ ನಮಗೆ ಮುಕ್ತಿ ಕೊಡಿಸಿ ಎಂದು ಪತ್ರದ ಮೂಲಕ ಮಹಿಳಾ ಸಿಬಂದಿ ಕೇಳಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಡಿಜಿ&ಐಜಿಪಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, ಹಳೇ ಹುಬ್ಬಳ್ಳಿ ಪಿಐ ಸುರೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ಮಾಡಿಸುತ್ತೇನೆ. ನನಗೆ ಯಾವ ಪತ್ರವೂ ಬಂದಿಲ್ಲ. ಆದ್ರೆ ಈ ವಿಚಾರ ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸತ್ಯಾಸತ್ಯತೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.
Woman police complain of sexually harrasment by Hubballi Old police station inspector suresh yallaru. The staff has alleged that the inspector videos calls staffs at night and also misbehaves when staffs go to his cabin.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm