ಬ್ರೇಕಿಂಗ್ ನ್ಯೂಸ್
21-12-24 09:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.21: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಬಳಿಯ ಟಿ ಬೇಗೂರಿನಲ್ಲಿ ಶನಿವಾರ ಭೀಕರ ಅಫಘಾತ ಸಂಭವಿಸಿದ್ದು, ಕೋಟಿ ಬೆಲೆಯ ಐಷಾರಾಮಿ ವೋಲ್ವೋ ಕಾರಿನಲ್ಲಿದ್ದ ಸಾಫ್ಟ್ವೇರ್ ಉದ್ಯಮಿ ಸಹಿತ ಕುಟುಂಬದ ಎಲ್ಲ ಆರು ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಉದ್ಯಮಿ ಕುಟುಂಬ ಸದಸ್ಯರು ಬೆಂಗಳೂರಿನಿಂದ ತುಮಕೂರು ಕಡೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಂಟೈನರ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಇವರ ವೋಲ್ವೋ ಕಾರಿನ ಮೇಲೆ ಪಲ್ಟಿಯಾಗಿದೆ. ಕಂಟೇನರ್ ಪಲ್ಟಿಯಾಗಿದ್ದರಿಂದ ಕಾರು ರಸ್ತೆಯಲ್ಲೇ ಅಪ್ಪಚ್ಚಿಯಾಗಿದೆ. ಪರಿಣಾಮ ಅದರಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ




ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಕಂಟೇನರ್ ಲಾರಿ ತನ್ನ ಎದುರಿಗಿದ್ದ ವಾಹನಕ್ಕೆ ಗುದ್ದಿ ಪಲ್ಟಿಯಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಮೂಲದ ಇಂಜಿನಿಯರ್ ಆಗಿರುವ ಚಂದ್ರಮ್ ಅವರ ಸಾಂಗ್ಲಿ ಜಿಲ್ಲೆಯ ಜತ್ ಗ್ರಾಮದ ಇಡೀ ಕುಟುಂಬ ಸ್ಥಳದಲ್ಲಿ ದುರಂತ ಸಾವಿಗೀಡಾಗಿದ್ದಾರೆ. ಉದ್ಯಮಿ ಚಂದ್ರಂ ಯೆಗಪಗೋಳ್ (48), 16 ವರ್ಷದ ಜಾನ್, 12 ವರ್ಷದ ದೀಕ್ಷಾ, 6 ವರ್ಷದ ಆರ್ಯ, 36 ವರ್ಷದ ವಿಜಯಲಕ್ಷ್ಮಿ, 42 ವರ್ಷದ ಗೌರಬಾಯಿ ಮೃತ ದುರ್ದೈವಿಗಳು. ಐಎಎಸ್ಟಿ ಸಲ್ಯೂಷನ್ ಎನ್ನುವ ಸಾಫ್ಟ್ವೇರ್ ಕಂಪನಿಯನ್ನು ಚಂದ್ರಮ್ ನಡೆಸುತ್ತಿದ್ದರು.
ಬೆಂಗಳೂರಿನಲ್ಲಿ ನೆಲೆಸಿದ್ದ ಇವರ ಕುಟುಂಬ ಕ್ರಿಸ್ಮಸ್ ಹಬ್ಬದ ರಜೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತ ಹಿನ್ನೆಲೆಯಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುಮಾರು 10 ಕಿಲೋ ಮೀಟರ್ ವರೆಗೂ ಸಂಚಾರಕ್ಕೆ ಅಡ್ಡಿಯಾಗಿತ್ತು.
Six persons, including two children travelling in an VOLVO SUV, died in a freak accident after a container truck toppled and fell on the SUV near Nelamangala on Saturday morning.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm