ಬ್ರೇಕಿಂಗ್ ನ್ಯೂಸ್
21-12-24 09:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.21: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಬಳಿಯ ಟಿ ಬೇಗೂರಿನಲ್ಲಿ ಶನಿವಾರ ಭೀಕರ ಅಫಘಾತ ಸಂಭವಿಸಿದ್ದು, ಕೋಟಿ ಬೆಲೆಯ ಐಷಾರಾಮಿ ವೋಲ್ವೋ ಕಾರಿನಲ್ಲಿದ್ದ ಸಾಫ್ಟ್ವೇರ್ ಉದ್ಯಮಿ ಸಹಿತ ಕುಟುಂಬದ ಎಲ್ಲ ಆರು ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಉದ್ಯಮಿ ಕುಟುಂಬ ಸದಸ್ಯರು ಬೆಂಗಳೂರಿನಿಂದ ತುಮಕೂರು ಕಡೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಂಟೈನರ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಇವರ ವೋಲ್ವೋ ಕಾರಿನ ಮೇಲೆ ಪಲ್ಟಿಯಾಗಿದೆ. ಕಂಟೇನರ್ ಪಲ್ಟಿಯಾಗಿದ್ದರಿಂದ ಕಾರು ರಸ್ತೆಯಲ್ಲೇ ಅಪ್ಪಚ್ಚಿಯಾಗಿದೆ. ಪರಿಣಾಮ ಅದರಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ




ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಕಂಟೇನರ್ ಲಾರಿ ತನ್ನ ಎದುರಿಗಿದ್ದ ವಾಹನಕ್ಕೆ ಗುದ್ದಿ ಪಲ್ಟಿಯಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಮೂಲದ ಇಂಜಿನಿಯರ್ ಆಗಿರುವ ಚಂದ್ರಮ್ ಅವರ ಸಾಂಗ್ಲಿ ಜಿಲ್ಲೆಯ ಜತ್ ಗ್ರಾಮದ ಇಡೀ ಕುಟುಂಬ ಸ್ಥಳದಲ್ಲಿ ದುರಂತ ಸಾವಿಗೀಡಾಗಿದ್ದಾರೆ. ಉದ್ಯಮಿ ಚಂದ್ರಂ ಯೆಗಪಗೋಳ್ (48), 16 ವರ್ಷದ ಜಾನ್, 12 ವರ್ಷದ ದೀಕ್ಷಾ, 6 ವರ್ಷದ ಆರ್ಯ, 36 ವರ್ಷದ ವಿಜಯಲಕ್ಷ್ಮಿ, 42 ವರ್ಷದ ಗೌರಬಾಯಿ ಮೃತ ದುರ್ದೈವಿಗಳು. ಐಎಎಸ್ಟಿ ಸಲ್ಯೂಷನ್ ಎನ್ನುವ ಸಾಫ್ಟ್ವೇರ್ ಕಂಪನಿಯನ್ನು ಚಂದ್ರಮ್ ನಡೆಸುತ್ತಿದ್ದರು.
ಬೆಂಗಳೂರಿನಲ್ಲಿ ನೆಲೆಸಿದ್ದ ಇವರ ಕುಟುಂಬ ಕ್ರಿಸ್ಮಸ್ ಹಬ್ಬದ ರಜೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತ ಹಿನ್ನೆಲೆಯಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುಮಾರು 10 ಕಿಲೋ ಮೀಟರ್ ವರೆಗೂ ಸಂಚಾರಕ್ಕೆ ಅಡ್ಡಿಯಾಗಿತ್ತು.
Six persons, including two children travelling in an VOLVO SUV, died in a freak accident after a container truck toppled and fell on the SUV near Nelamangala on Saturday morning.
01-01-26 03:05 pm
Bangalore Correspondent
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm