ಬ್ರೇಕಿಂಗ್ ನ್ಯೂಸ್
21-12-24 09:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.21: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಬಳಿಯ ಟಿ ಬೇಗೂರಿನಲ್ಲಿ ಶನಿವಾರ ಭೀಕರ ಅಫಘಾತ ಸಂಭವಿಸಿದ್ದು, ಕೋಟಿ ಬೆಲೆಯ ಐಷಾರಾಮಿ ವೋಲ್ವೋ ಕಾರಿನಲ್ಲಿದ್ದ ಸಾಫ್ಟ್ವೇರ್ ಉದ್ಯಮಿ ಸಹಿತ ಕುಟುಂಬದ ಎಲ್ಲ ಆರು ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಉದ್ಯಮಿ ಕುಟುಂಬ ಸದಸ್ಯರು ಬೆಂಗಳೂರಿನಿಂದ ತುಮಕೂರು ಕಡೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಂಟೈನರ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಇವರ ವೋಲ್ವೋ ಕಾರಿನ ಮೇಲೆ ಪಲ್ಟಿಯಾಗಿದೆ. ಕಂಟೇನರ್ ಪಲ್ಟಿಯಾಗಿದ್ದರಿಂದ ಕಾರು ರಸ್ತೆಯಲ್ಲೇ ಅಪ್ಪಚ್ಚಿಯಾಗಿದೆ. ಪರಿಣಾಮ ಅದರಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ




ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಕಂಟೇನರ್ ಲಾರಿ ತನ್ನ ಎದುರಿಗಿದ್ದ ವಾಹನಕ್ಕೆ ಗುದ್ದಿ ಪಲ್ಟಿಯಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಮೂಲದ ಇಂಜಿನಿಯರ್ ಆಗಿರುವ ಚಂದ್ರಮ್ ಅವರ ಸಾಂಗ್ಲಿ ಜಿಲ್ಲೆಯ ಜತ್ ಗ್ರಾಮದ ಇಡೀ ಕುಟುಂಬ ಸ್ಥಳದಲ್ಲಿ ದುರಂತ ಸಾವಿಗೀಡಾಗಿದ್ದಾರೆ. ಉದ್ಯಮಿ ಚಂದ್ರಂ ಯೆಗಪಗೋಳ್ (48), 16 ವರ್ಷದ ಜಾನ್, 12 ವರ್ಷದ ದೀಕ್ಷಾ, 6 ವರ್ಷದ ಆರ್ಯ, 36 ವರ್ಷದ ವಿಜಯಲಕ್ಷ್ಮಿ, 42 ವರ್ಷದ ಗೌರಬಾಯಿ ಮೃತ ದುರ್ದೈವಿಗಳು. ಐಎಎಸ್ಟಿ ಸಲ್ಯೂಷನ್ ಎನ್ನುವ ಸಾಫ್ಟ್ವೇರ್ ಕಂಪನಿಯನ್ನು ಚಂದ್ರಮ್ ನಡೆಸುತ್ತಿದ್ದರು.
ಬೆಂಗಳೂರಿನಲ್ಲಿ ನೆಲೆಸಿದ್ದ ಇವರ ಕುಟುಂಬ ಕ್ರಿಸ್ಮಸ್ ಹಬ್ಬದ ರಜೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತ ಹಿನ್ನೆಲೆಯಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುಮಾರು 10 ಕಿಲೋ ಮೀಟರ್ ವರೆಗೂ ಸಂಚಾರಕ್ಕೆ ಅಡ್ಡಿಯಾಗಿತ್ತು.
Six persons, including two children travelling in an VOLVO SUV, died in a freak accident after a container truck toppled and fell on the SUV near Nelamangala on Saturday morning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm