ಬ್ರೇಕಿಂಗ್ ನ್ಯೂಸ್
14-12-20 09:44 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಡಿ.14: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಹಕ್ಕಿಯಾಗಿದ್ದ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ ಎಂಬ ಬಗ್ಗೆ ಸುದ್ದಿ ಹಬ್ಬಿತ್ತು. ಅದಕ್ಕೆ ಪೂರಕವಾಗಿ ಆಕೆ ಮುಸ್ಲಿಂ ಆಗಿ ಬಟ್ಟೆ ತೊಟ್ಟು ಅಜೀಜ್ ಎಂಬವರ ಜೊತೆ ಹಾರ ಬದಲಾಯಿಸಿಕೊಂಡ ಫೋಟೊಗಳು ಹರಿದಾಡಿದ್ದವು. ಇದಲ್ಲದೆ, ಆಕೆಯ ಮತಾಂತರ ಆಗಿರುವ ಬಗ್ಗೆ ದಾಖಲೆ ಪತ್ರಗಳೂ ಹರಿದಾಡಿದ್ದವು. ಇದೀಗ ಬೆಂಗಳೂರಿನ ವಕೀಲರೊಬ್ಬರು ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಪೊಲೀಸ್ ದೂರು ನೀಡಿದ್ದಾರೆ.
ಸಂಜನಾ ಮತಾಂತರ ಆಗಿರುವ ಬಗ್ಗೆ ದಾಖಲೆಯನ್ನು ಪ್ರಶಾಂತ್ ಸಂಬರ್ಗಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಇದೀಗ, ನಟಿ ಸಂಜನಾ ಗಲ್ರಾನಿಯನ್ನು ಬಲವಂತದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಮೌಲ್ವಿಯೊಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.


ಸಂಜನಾರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ, ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಾಯಿಸಲಾಗಿದೆ. ಈ ಬಲವಂತದ ಮತಾಂತರ ಮಾಡಿರುವುದು ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.
ವೈದ್ಯ ಅಜೀಜ್ ಎಂಬುವರ ಜೊತೆಗೆ ಸಂಜನಾ ವಿವಾಹವಾಗಿದೆ ಎನ್ನಲಾಗುತ್ತಿದೆ, ಇದಕ್ಕೆ ಸಾಕ್ಷಿ ಎಂಬಂತೆ ಇಬ್ಬರೂ ಹಾರಗಳನ್ನು ತೊಟ್ಟಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಆದರೆ, ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಗೆ ಬಂದಿಲ್ಲ.
Actress Sanjana Galrani is facing another hardship after she was jailed for three months in a drug dealing case. A lawyer in Bangalore has filed a complaint alleging that actress Sanjana was forcibly converted to Islam.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm