ಬ್ರೇಕಿಂಗ್ ನ್ಯೂಸ್
22-12-24 10:26 pm HK News Desk ಕರ್ನಾಟಕ
ಬೆಳಗಾವಿ, ಡಿ.22: ಯಾರ ನಿರ್ದೇಶನದ ಮೇರೆಗೆ ಠಾಣೆಯಿಂದ ಠಾಣೆಗೆ ಸಿ.ಟಿ ರವಿಯನ್ನು ಪೊಲೀಸರು ಸುತ್ತಾಡಿಸಿದ್ದಾರೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಈ ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದ ಮೇಲೆ ರವಿಯನ್ನು ಬಂಧಿಸಲಾಗಿತ್ತು. ಗುರುವಾರ ರಾತ್ರಿಯೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿದ್ದೆ. ಪೊಲೀಸರು ಸೂಚನೆಯಂತೆ ನಡೆದಿದ್ದರೆ ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿರಲಿಲ್ಲ ಎಂದು ಹೇಳಿದರು.
ರವಿ ಅವರು ಯಾವುದೇ ಅವಹೇಳನಕಾರಿ ಪದಗಳನ್ನು ಬಳಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಈ ಪ್ರಕರಣ ಮುಂದುವರಿಸುವುದರಲ್ಲಿ ಅರ್ಥವಿಲ್ಲ. ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ನಡೆದಾಗ ಮಾರ್ಷಲ್ ಗಳು ರಕ್ಷಣೆ ಮಾಡಿದ್ದಾರೆ. ಸೌಧದ ಒಳಗೆ ಅನೇಕ ಕಾರ್ಯಕರ್ತರು ಇರ್ತಾರೆ, ಇವರು ಇಂಥವರೇ ಅಂತಾ ಹೇಳುವುದು ಕಷ್ಟ. ದೂರು ದಾಖಲಾದ ಬಳಿಕವೇ ಸಿ.ಟಿ ರವಿ ಬಂಧನವಾಗಿದೆ ಎಂದು ತಿಳಿಸಿದರು.
ಸಿಟಿ ರವಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದರು. ಯಾರ ನಿರ್ದೇಶನ ಮೇರೆಗೆ ಸಿ.ಟಿ ರವಿಯನ್ನು ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ನಂಗೆ ಗೊತ್ತಿಲ್ಲ. ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್ಗೆ ಹಾಜರು ಮಾಡುವಂತೆ ಪೊಲೀಸರಿಗೆ ಹೇಳಿದ್ದೆ. ಬೆಳಗಾವಿ ಪೊಲೀಸರು ಅಷ್ಟು ಮಾಡಿದ್ರೆ ಇಷ್ಟೆಲ್ಲ ಆಗುತ್ತಿರಲಿಲ್ಲ, ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಮೊದಲ ಘಟನೆ ಇದು. ಹೀಗಾಗಿ ಅನೇಕ ಗೊಂದಲಗಳು ಸೃಷ್ಟಿಯಾಗಿವೆ ಎಂದರು.
ಇದೇ ವೇಳೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬಿಜೆಪಿಯವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆಂದು ಆರೋಪಿಸಿದರು. ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆಯಷ್ಟೇ ಕೆಟ್ಟದಾಗಿ ಮಾತನಾಡಿಲ್ಲ, ಸಿದ್ದರಾಮಯ್ಯನವರ ಮೇಲೂ ಕೀಳು ಮಾತುಗಳನ್ನಾಡಿದ್ದಾರೆ, ಸದನದಲ್ಲಿ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ, ಬಿಜೆಪಿ ನಾಯಕರು ಅವರ ನಡತೆಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು. ಕಾಂಗ್ರೆಸ್ ನಾಯಕರು ಇಂತಹ ಹೇಳಿಕೆ ನೀಡಿದ್ದರೆ ನಾನು ಖಂಡಿಸುತ್ತಿದ್ದೆ, ಆದರೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ತಮ್ಮ ಪಕ್ಷದ ನಾಯಕರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆಂದು ಕಿಡಿಕಾರಿದರು.
Public Works Department Minister Satish Jarkiholi on Saturday said he was not aware on whose instructions BJP MLC CT Ravi was shifted from one station to another on Thursday night.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm