ಬ್ರೇಕಿಂಗ್ ನ್ಯೂಸ್
24-12-24 03:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬಿಜೆಪಿ ಎಂಎಲ್ಸಿ ಸಿ.ಟಿ ರವಿ ನಿಂದಿಸಿದ್ದಾರೆನ್ನುವ ಪ್ರಕರಣದಲ್ಲಿ ಸದನದ ಒಳಗಡೆ ಮಹಜರು ನಡೆಸಲು ಸಭಾಪತಿ ಬಸವರಾಜ ಹೊರಟ್ಟಿ ಪೊಲೀಸರಿಗೆ ಅನುಮತಿ ನಿರಾಕರಿಸಿದ್ದು ಬೆಳಗಾವಿ ನಗರ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಅವರು ಸದನದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೋರಿ ಸಭಾಪತಿಗೆ ಪತ್ರ ಬರೆದಿದ್ದಾರೆ. ಆದರೆ ಈ ಬಗ್ಗೆ ಹೇಳಿಕೆ ನೀಡಿರುವ ಹೊರಟ್ಟಿ, ಪೊಲೀಸರು ಸದನದ ಒಳಗಡೆ ಬಂದು ಪರಿಶೀಲಿಸುವ ಹಕ್ಕು ಹೊಂದಿಲ್ಲ ಎಂದಿದ್ದಾರೆ.
ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬಂಧಿಸಲಾಗಿದೆ. ಸದ್ಯ, ನಾವು ಎರಡೂ ಕಡೆಯಿಂದ ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ. ಈ ಬಗ್ಗೆ ದೂರು ನೀಡಿದರೆ, ನಾವು ಕ್ರಮ ಕೈಗೊಳ್ಳುತ್ತೇವೆ. ಪರಿಷತ್ತಿನ ಒಳಗೆ ನಡೆದ ಘಟನೆಯಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಬಾರದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ಮಹಜರು ನಡೆಯದ ಹೊರತು ತನಿಖೆ ಅಪೂರ್ಣವಾಗಲಿದ್ದು ಒಟ್ಟು ಪ್ರಕರಣಕ್ಕೆ ಹಿನ್ನಡೆಯಾಗಿದೆ. ಇದರಿಂದಾಗಿ ಮುಂದಿನ ಬೆಳವಣಿಗೆ ಬಗ್ಗೆ ಕುತೂಹಲ ಕೆರಳಿಸಿದೆ. ಸದನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದ ಬಳಿಕ ಸದನಕ್ಕೆ ಬೀಗ ಹಾಕಲಾಗಿದೆ. ಸದನ ಪ್ರವೇಶ ಮಾಡಲು ಪೊಲೀಸರು ಅಧಿಕಾರ ಹೊಂದಿಲ್ಲ.
ಸದನದಲ್ಲಿ ನಡೆದಿರುವ ಘಟನೆ ಬಗ್ಗೆ ಕೂಲಂಕುಷವಾಗಿ ಚರ್ಚಿಸಿದ ಬಳಿಕ ರೂಲಿಂಗ್ ನೀಡಿದ್ದೇನೆ. ಅಲ್ಲಿಗೆ ಅದು ಮುಗಿದ ಅಧ್ಯಾಯ. ಮುಂದೆ ಎರಡೂ ಕಡೆಯಿಂದ ದೂರು ಬಂದರೆ ಮಾತ್ರ ಪರಿಶೀಲಿಸಲಾಗುವುದು. ಸದ್ಯಕ್ಕೆ ಏನೂ ಬೆಳವಣಿಗೆ ಆಗಿಲ್ಲ ಎಂದು ಹೊರಟ್ಟಿ ತಿಳಿಸಿದ್ದಾರೆ. ಬೆಳಗಾವಿ ಕಮಿಷನರ್ ಯಡಾ ಮಾರ್ಟಿನ್ ಪ್ರತಿಕ್ರಿಯಿಸಿ, ನಾವು ಸ್ಥಳ ಮಹಜರಿಗೆ ಅನುಮತಿ ಕೇಳಿದ್ದೆವು. ಈವರೆಗೆ ಅನುಮತಿ ಸಿಕ್ಕಿಲ್ಲ. ನಾವು ಸದನ ಪ್ರವೇಶ ಮಾಡಿಲ್ಲ. ಸಿಟಿ ರವಿ ಅವರು ಸದನದಿಂದ ಹೊರಬಂದ ಬಳಿಕ ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ.
CT Ravi remarks on Lakshmi Hebbalkar, speaker Khader rejects spot mahazar inside the parliament. Ravi was taken into custody after the registration of a case under sections 75 (sexual harassment) and 79 (act intended to insult the modesty of a woman) of the Bharatiya Nyaya Sanhita at Hirebagewadi police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm