ಬ್ರೇಕಿಂಗ್ ನ್ಯೂಸ್
24-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24 : ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎಂಬುದನ್ನು ಹೇಳಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯವರು ಹೂಹಾರ ಹಾಕಿ ಅವರನ್ನು ಸ್ವಾಗತಿಸುತ್ತಿದ್ದಾರೆ. ಅವರು ಹೇಳೋದು ನಿಜವೇ ಆದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ಸವಾಲು ಹಾಕಿದ್ದು, ಸಿಟಿ ರವಿ ನಿತ್ಯವೂ ಮಾಧ್ಯಮಗಳ ಮುಂದೆ ನಾನು ಯಾವುದೇ ಅಶ್ಲೀಲ ಪದ ಬಳಸಿಲ್ಲ ಎಂದು ವಾದಿಸುತ್ತಿದ್ದಾರೆ. ಹಾಗಿದ್ದರೆ ಧರ್ಮಸ್ಥಳದಲ್ಲಿ ನನ್ನ ಉಪಸ್ಥಿತಿಯಲ್ಲಿ ಈ ಕುರಿತು ಪ್ರಮಾಣ ಮಾಡಲಿ. ಧರ್ಮಸ್ಥಳ ಅವರಿಗೆ ಹತ್ತಿರವೇ ಇದೆ, ಅಲ್ಲಿಗೆ ಬರಲಿ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು.
ಸಿಟಿ ರವಿ ನನ್ನ ವಿರುದ್ಧ ಬಳಸಿರುವ ಪದ ಸಭ್ಯ ನಾಗರಿಕರು ಬಳಸುವಂತದ್ದಲ್ಲ. ಅದನ್ನು ನಾನು ತಪ್ಪಿಯೂ ನನ್ನ ಬಾಯಿಂದ ಆಡಲಾರೆ. ಆದರೆ ಅವರ ಪದ ಬಳಕೆಯಿಂದ ನನಗೆ ಆಗಿರುವ ನೋವು ಮಾತ್ರ ಅಗಾಧ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾಗಿ ನುಡಿದರು.
ಹೆಣ್ಣು ಮಕ್ಕಳ ಬಗ್ಗೆ ಸಿಟಿ ರವಿ ಅವರಿಗೆ ಅದೆಷ್ಟು ಗೌರವವಿದೆ ಎಂಬುದು ಈಗ ಗೊತ್ತಾಗಿದೆ. ಗೃಹ ಸಚಿವರು ಈಗ ಪ್ರಕರಣದ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪು ಮಾಡಿಲ್ಲ ಎಂದ ಮೇಲೆ ಸಿಟಿ ರವಿ ಯಾವ ತನಿಖೆಗೂ ಹೆದರಬಾರದು ಅಲ್ಲವೇ ಎಂದ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಮಿಕವಾಗಿ ಪ್ರಶ್ನಿಸಿದರು.
ಈ ಬಗ್ಗೆ ತಿರುಗೇಟು ನೀಡಿರುವ ಸಿಟಿ ರವಿ, ಧರ್ಮಸ್ಥಳ ನಮಗೆ ಪಕ್ಕದಲ್ಲೇ ಇರುವ ಊರು. ನಾನು ಆಗಾಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
Lakshmi Hebbalkar challenged CT Ravi to swear before Lord Manjunatha at Dharmasthala if he had not made those remarks. She said she will also be present in Dharmasthala with her family on that day and asked Ravi to come with his family too.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm