ಬ್ರೇಕಿಂಗ್ ನ್ಯೂಸ್
26-12-24 04:45 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಅಪರಾಧ ಪ್ರಕರಣದಲ್ಲಿ ಆರೋಪಿಗೆ ಜಾಮೀನು ಕೊಡಿಸುವ ನೆಪದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ ಬಗ್ಗೆ ಮಹಿಳಾ ವಕೀಲರೊಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೈಕೋರ್ಟ್ ಜಂಟಿ ರಿಜಿಸ್ಟ್ರಾರ್ ಎಂ.ರಾಜೇಶ್ವರಿ ನೀಡಿದ ದೂರಿನಂತೆ ವಕೀಲೆ ದಯೀನಾ ಬಾನು ಎಂಬವರ ವಿರುದ್ಧ ಬಿಎನ್ಎಸ್ 318 (4) ಅಡಿ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ಒಂದರಲ್ಲಿ ಜಾಮೀನು ಕೊಡಿಸಲು ಹೈಕೋರ್ಟ್ ನ್ಯಾಯಮೂರ್ತಿ 50 ಲಕ್ಷ ರೂ. ಹಣ ಕೇಳುತ್ತಿದ್ದಾರೆ. ಹಣ ನೀಡದಿದ್ದರೆ ಜಾಮೀನು ಅರ್ಜಿಯನ್ನ ಬೇರೆ ವಕೀಲರಿಂದ ಮಾಡಿಸಿಕೊಳ್ಳಿ ಎಂದು ದಯೀನಾ ಬಾನು ಹೇಳಿರುವುದಾಗಿ ಎಫ್ಐಆರ್ ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ 24 ವರ್ಷದ ವಿಷ್ಣುದೇವನ್ ಜಾಮೀನು ಸಿಗದೆ ಮೂರು ವರ್ಷಗಳಿಂದ ಜೈಲಿನಲ್ಲಿದ್ದ. ಮಗನನ್ನು ಜಾಮೀನಿನಲ್ಲಿ ಬಿಡಿಸಲು ಆತನ ತಾಯಿ ಥೆರೆಸಾ, ಮಹಿಳಾ ನ್ಯಾಯವಾದಿ ಮರೀನಾ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಮರೀನಾ 10 ಲಕ್ಷ ರೂ. ಹಣ ಪಡೆದಿದ್ದರು. ಹಣ ಪಡೆದರೂ ಆರೋಪಿಗೆ ಜಾಮೀನು ಕೊಡಿಸಲು ವಿಫಲವಾಗಿದ್ದರಿಂದ ತಾಯಿ ಥೆರೆಸಾ, ತನ್ನ ಹಣ ವಾಪಸ್ ನೀಡುವಂತೆ ಕೇಳಿದ್ದರು. ಆಗ ವಕೀಲೆ 9 ಲಕ್ಷ ರೂ. ಮೊತ್ತದ 3 ಚೆಕ್ ನೀಡಿದ್ದು ಬಿಟ್ಟರೆ ಹಣ ಹಿಂದಿರುಗಿಸಲಿರಲಿಲ್ಲ.
ಹಣ ವಾಪಸ್ ನೀಡಲು ಒತ್ತಡ ಹೇರಿದಾಗ ಥೆರೆಸಾಗೆ ವಕೀಲೆ ಮರೀನಾ ಅವರು ಆರತಿ ಎಂಬವರನ್ನ ಪರಿಚಯಿಸಿದ್ದರು. ಅವರು ತನಗೆ ಹೈಕೋರ್ಟ್ ನ್ಯಾಯಮೂರ್ತಿಯ ಪರಿಚಯ ಇರುವುದಾಗಿ ಹೇಳಿ 72 ಸಾವಿರ ರೂ. ಪಡೆದಿದ್ದರು. ಆದರೆ ಯಾವುದೇ ಫಲ ನೀಡಿರಲಿಲ್ಲ. ಇದೇ ವೇಳೆ, ಮತ್ತೊಬ್ಬ ವಕೀಲೆ ದಯೀನಾ ಬಾನು ಪರಿಚಯವಾಗಿದ್ದು ಅವರು ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಜಾಮೀನು ಕೊಡಿಸಲು 50 ಲಕ್ಷ ರೂ. ಹಣವನ್ನು ಕೇಳುತ್ತಿದ್ದಾರೆ. ಹಣ ನೀಡಲು ಸಾಧ್ಯವಾಗದಿದ್ದರೆ ಜಾಮೀನು ಪಡೆಯಲು ಬೇರೆ ವಕೀಲರನ್ನು ನೇಮಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಇದರಿಂದ ಬೇಸತ್ತ ಥೆರೆಸಾ ಅವರು ವಕೀಲೆ ದಯೀನಾ ಬಾನು ಹೈಕೋರ್ಟ್ ನ್ಯಾಯಮೂರ್ತಿ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾಗಿ ಹೈಕೋರ್ಟ್ ಕಾನೂನು ವಿಭಾಗದ ಜಂಟಿ ರಿಜಿಸ್ಟ್ರಾರ್ ಗಮನಕ್ಕೆ ತಂದಿದ್ದರು. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been filed against advocate Dhahina Bhanu in Bangalore for allegedly misusing the name of a High Court judge and demanding 50 lakhs. The complaint has been registered at the Vidhana Soudha police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm