ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm